Advertisement

ಮೃತ ರೈತ ಮಹಿಳೆ ಮನೆಗೆ ಶಾಸಕಖಂಡ್ರೆ ಭೇಟಿ-ಪರಿಹಾರ ವಿತರಣೆ

02:45 PM Mar 23, 2022 | Team Udayavani |

ಭಾಲ್ಕಿ: ಇತ್ತೀಚೆಗೆ ರಾಶಿ ಯಂತ್ರಕ್ಕೆ ಸಿಲುಕಿ ಮೃತಪಟ್ಟ ಅಲಿಯಾಬಾದ್‌(ಕೆ) ಗ್ರಾಮದ ರೈತ ಮಹಿಳೆ ಮನೆಗೆ ಶಾಸಕ ಈಶ್ವರ ಖಂಡ್ರೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

Advertisement

ಮಾ.9ರಂದು ಹೊಲದಲ್ಲಿ ರಾಶಿ ಮಾಡುವ ಸಂದರ್ಭದಲ್ಲಿ ಸುವರ್ಣ ಬಾಲಾಜಿ ಚಿಕಲೆ ಎಂಬ ಮಹಿಳೆ ರಾಶಿ ಯಂತ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರು ಭೇಟಿ ನೀಡಿ ವೈಯಕ್ತಿಕವಾಗಿ 50 ಸಾವಿರ ರೂ. ಪರಿಹಾರ ವಿತರಿಸಿದರು.

ನಂತರ ಮಾತನಾಡಿದ ಅವರು, ಮಹಿಳೆ ಮೃತಪಟ್ಟಿರುವುದು ತೀವ್ರ ದುಃಖ ತರಿಸಿದೆ. ತಾಲೂಕಿನಲ್ಲಿ ಇದು ಎರಡನೇ ಘಟನೆ. ಈ ಕುರಿತು ವಿಧಾನ ಮಂಡಲ ಅಧಿವೇಶನದಲ್ಲಿ ಧ್ವನಿ ಎತ್ತಿದ್ದೇನೆ. ರೈತರಿಗೆ ಕೃಷಿ ಯಂತ್ರ ಬಳಕೆ ಬಗ್ಗೆ ತರಬೇತಿ ನೀಡುವಂತೆ ಒತ್ತಾಯಿಸಿದ್ದೇನೆ. ಜತೆಗೆ ಕೃಷಿ ಯಂತ್ರಕ್ಕೆ ಸಿಲುಕಿ ಮೃತಪಟ್ಟ ರೈತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಕೊಡುವಂತೆ ಆಗ್ರಹಿಸಿದ್ದೇನೆ. ಸದ್ಯಕ್ಕೆ ವೈಯಕ್ತಿಕವಾಗಿ ಪರಿಹಾರ ನೀಡಿದ್ದೇನೆ. ಬರುವ ದಿನಗಳಲ್ಲಿ ಸರ್ಕಾರದ ಮೇಲೆ ಒತ್ತಡ ತಂದು ಹೆಚ್ಚಿನ ರೀತಿಯಲ್ಲಿ ಪರಿಹಾರ ಸಿಗುವಂತೆ ಒತ್ತಾಯಿಸುತ್ತೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next