Advertisement

ಐಟಿ ಅಧಿಕಾರಿಗಳಿಂದ ಶಶಿಕಲಾ ವಿಚಾರಣೆ

11:24 AM Dec 14, 2018 | Team Udayavani |

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ತಮಿಳುನಾಡಿನ ಎಐಎಡಿಎಂಕೆ ನಾಯಕಿ ಶಶಿಕಲಾ ನಟರಾಜನ್‌ ಅವರನ್ನು ಗುರುವಾರ ಚೆನ್ನೈನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 6 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

Advertisement

ಬೆಳಗ್ಗೆ 11 ಗಂಟೆ ಸುಮಾರಿಗೆ ಚೆನ್ನೈನ ಆದಾಯ ತೆರಿಗೆ ಇಲಾಖೆ ಅಧಿಕಾರಿ ವೀರರಾಘವ ನೇತೃತ್ವದ ತಂಡ ಆಗಮಿಸಿ ಸಂಜೆ 6 ಗಂಟೆವರೆಗೆ ಶಶಿಕಲಾ ನಟರಾಜನ್‌ ಅವರನ್ನು ವಿಚಾರಣೆ ನಡೆಸಿದೆ. ಇದೇ ವೇಳೆ ಐದು ಬ್ಯಾಗ್‌ಗಳಲ್ಲಿ ತಂದಿದ್ದ ಕಡತಗಳನ್ನು ಶಶಿಕಲಾ ಮುಂದೆಯೇ ಪರಿಶೀಲಿಸಿದರು. ಪ್ರಕರಣ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಶುಕ್ರವಾರ ಕೂಡ ವಿಚಾರಣೆಗೆ ನಡೆಸುವ ಸಾಧ್ಯತೆಯಿದೆ ಎಂದು ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ತಮಿಳುನಾಡಿನ ಚೆನ್ನೈನಲ್ಲಿರುವ ಶಶಿಕಲಾ ನಟರಾಜನ್‌ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮ ಆಸ್ತಿಗಳಿಕೆಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next