Advertisement

ಸಸಿಹಿತ್ಲು: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

07:46 AM Jul 20, 2021 | Team Udayavani |

ಸಸಿಹಿತ್ಲು: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೋರ್ವ ಶವವಾಗಿ ಪತ್ತೆಯಾದ ಘಟನೆ ಸಸಿಹಿತ್ಲು ಮುಂಡ ಬೀಚ್ ನಲ್ಲಿ ನಡೆದಿದೆ.

Advertisement

ಮುಕ್ಕ ನಿವಾಸಿ ಕಿರಣ್ ಶೆಟ್ಟಿ ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ನಾಪತ್ತೆಯಾಗಿದ್ದ  ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಿರಣ್ ಶೆಟ್ಟಿ ಪಾಲುದಾರಿಕೆಯಲ್ಲಿ ಅಂಗಡಿ ನಡೆಸುತ್ತಿದ್ದರು. ಕೋವಿಡ್ ಕಾರಣದಿಂದ ವ್ಯಾಪಾರ ಇಲ್ಲದೆ ಹಣದ ಸಮಸ್ಯೆಯಿಂದ ಇದ್ದರು ಎಂದು ಕುಟುಂಬಸ್ಥರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು.

ನಾಪತ್ತೆಯಾದ ಬಗ್ಗೆ ಕಿರಣ್ ಶೆಟ್ಟಿ ಮನೆಯವರು  ಸಂಬಂಧಿಕರ ಬಳಿ, ಗೆಳೆಯರಲ್ಲಿ ವಿಚಾರಿಸಿದ್ದರು. ಆದರೆ ಇಂದು ಕಿರಣ್ ಶೆಟ್ಟಿ ಶವವಾಗಿ ಪತ್ತೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next