Advertisement

ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಹಾಜರಾದ ಶಶಿಕಲಾ ನಟರಾಜನ್‌

11:51 PM Mar 11, 2022 | Team Udayavani |

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಪರ ಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಐಷಾ ರಾಮಿ ಜೀವನಕ್ಕೆ ಅವಕಾಶ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ| ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾ ನಟರಾಜನ್‌ ಹಾಗೂ ಆಕೆಯ ಸಂಬಂಧಿ ಇಳವರಸಿ ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು.

Advertisement

ತನಿಖೆ ನಡೆಸಿದ ಎಸಿಬಿ ಅಧಿಕಾರಿ ಗಳು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ 6 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಆರೋಪಿ ಗಳಾದ ಶಶಿಕಲಾ, ಇಳವರಸಿ, ಜೈಲು ಅಧಿಕಾರಿಗಳಾದ ಗಜರಾಜು, ಸುರೇಶ್‌ ಶುಕ್ರವಾರ ಲೋಕಾಯುಕ್ತ ವಿಶೇಷ ಕೋರ್ಟಿಗೆ ವಿಚಾರಣೆಗೆ ಹಾಜರಾಗಿದ್ದರು. ಅವರಿಗೆ ಜಾಮೀನು ಸಿಕ್ಕಿದ್ದು, ಎ. 16ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್‌ ಆದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next