Advertisement
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜಿಲ್ಲಾಧಿಕಾರಿಗಳು ಟೋಲ್ ವಿಚಾರದಲ್ಲಿ ಅವಸರದ ತೀರ್ಮಾನ ಕೈಗೊಂಡಿದ್ದಾರೆ. ಏಕಾಏಕಿ ಟೋಲ್ಗೆ ಅವಕಾಶ ನೀಡಿದ್ದು ಸರಿಯಲ್ಲ ಎಂದರು.
Related Articles
Advertisement
ಜಯಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ, ಹೆದ್ದಾರಿ ಜಾಗೃತ ಸಮಿತಿಯ ಅಧ್ಯಕ್ಷ ಪ್ರತಾಪ್ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಶಂಕರ ಕುಂದರ್ ಕೋಟ ಮುಂತಾದವರು ಮಾತನಾಡಿದರು.
ಹೋರಾಟಗಾರರ ಬಂಧನ: ಪ್ರತಿಭಟನ ಸಭೆಯ ಅನಂತರ ಹೋರಾಟಗಾರರು ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು ಹಾಗೂ ಉಡುಪಿಯಿಂದ ಕುಂದಾಪುರಕ್ಕೆ ತೆರಳುವ ಮಾರ್ಗದಲ್ಲಿ ಕೆಲವು ನಿಮಿಷಗಳ ಕಾಲ ರಸ್ತೆ ತಡೆ ನಡೆಸಿದರು.
ಈ ಸಂದರ್ಭ ಸಾಸ್ತಾನ ಮುಖ್ಯಪೇಟೆಯ ಬಳಿ ಜಮಾವಣೆಗೊಂಡಿದ್ದ ನೂರಾರು ಸಂಖ್ಯೆಯ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ಟೋಲ್ ಕೇಂದ್ರದಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ತಡೆದರು.
ಸೋಮವಾರ ಜಿಲ್ಲಾ ಬಂದ್ ನಿಶ್ಚಿತಜಿಲ್ಲಾಡಳಿತ ನಮ್ಮ ಸಮಸ್ಯೆಗೆ ದನಿಯಾಗುವ ಬದಲು ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದ್ದರಿಂದ ಸೋಮವಾರ ಕರೆ ನೀಡಿರುವ ಬಂದ್ ದೊಡ್ಡ ಪ್ರಮಾಣದಲ್ಲಿ ನಡೆಯಲಿದೆ. ಈಗಾಗಲೇ ವಿದ್ಯಾರ್ಥಿ ಸಂಘಟನೆಗಳು, ಬಸ್ ಮಾಲಕರು ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದಾರೆ. ಎಲ್ಲ ಸಂಘ-ಸಂಸ್ಥೆಗಳು, ಬೆಂಬಲ ನೀಡುವ ಭರವಸೆ ಇದೆ. ಸೋಮವಾರ ಜಿಲ್ಲೆಯಾದ್ಯಂತ ಎಲ್ಲ ಭಾಗಗಳಲ್ಲಿ ಸ್ಥಳೀಯ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೆದ್ದಾರಿ ಜಾಗೃತ ಸಮಿತಿಯ ಅಧ್ಯಕ್ಷ ಪ್ರತಾಪ್ ಶೆಟ್ಟಿ ತಿಳಿಸಿದ್ದಾರೆ.