Advertisement

‌ಕರಾವಳಿಯಲ್ಲಿ ಮತ್ತೆ ಸ್ಯಾಟಲೈಟ್‌ ಫೋನ್‌ ಕರೆ?

02:30 AM Jan 19, 2021 | Team Udayavani |

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಿಷೇಧಿತ “ತುರಾಯ’ ಸ್ಯಾಟಲೈಟ್‌ ಫೋನ್‌ ಬಳಸಿ ಮಾತುಕತೆ ನಡೆಸಿರುವ ಬಗ್ಗೆ ಮತ್ತೆ ಅನುಮಾನ  ಮೂಡಿದೆ.

Advertisement

ದ.ಕ., ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆ ಮಾಡಿರುವ ಬಗ್ಗೆ ಲೊಕೇಶನ್‌ ಪತ್ತೆಯಾಗಿದೆ ಎನ್ನಲಾಗಿದ್ದು, 10 ದಿನಗಳಲ್ಲಿ 3 ಬಾರಿ ಬಳಸಲಾಗಿದೆ ಎಂಬ ಮಾಹಿತಿ ಗುಪ್ತಚರ ತನಿಖಾ ತಂಡ “ರಾ’ಗೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ.

ಕಳೆದ ಜೂ. 23ರಂದು ಇದೇರೀತಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆಯಾದ ಬಗ್ಗೆ  ಅನುಮಾನ ವ್ಯಕ್ತವಾಗಿತ್ತು. ಭಯೋತ್ಪಾದಕ ಚಟುವಟಿಕೆ ಸಂಬಂಧಿಸಿ ಈ ರೀತಿ ಸ್ಯಾಟಲೈಟ್‌ ಫೋನ್‌ಗಳನ್ನು ಬಳಸುವ ಸಾಧ್ಯತೆ ಗಳಿರುತ್ತವೆ ಎಂದು ಹೇಳಲಾಗುತ್ತಿದ್ದು, ಗುಪ್ತಚರ ಇಲಾಖೆಗಳು ಈ ಬಗ್ಗೆ ವಿಶೇಷ ನಿಗಾ ವಹಿಸಿ ತನಿಖೆ ಆರಂಭಿಸಿವೆ ಎಂದು ಮೂಲಗಳು ತಿಳಿಸಿವೆ.

ಬಂಟ್ವಾಳ ಪ್ರದೇಶ ದಲ್ಲಿ ಸ್ಯಾಟಲೈಟ್‌ ಫೋನ್‌ ಸಿಗ್ನಲ್‌ ಲಭ್ಯವಾಗಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಈ ಬಗ್ಗೆ ಐಎಸ್‌ಡಿಯಿಂದ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಲಾಗುವುದು. ಈಗ ನಾನು ಕರಾವಳಿ ಭಾಗದಲ್ಲಿಯೇ ಇದ್ದು, ಕೂಡಲೇ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು– ಭಾಸ್ಕರ ರಾವ್‌  ಎಡಿಜಿಪಿ, ಆಂತರಿಕಾ ಭದ್ರತಾ ದಳ (ಐಎಸ್‌ಡಿ)

Advertisement

Udayavani is now on Telegram. Click here to join our channel and stay updated with the latest news.

Next