Advertisement

ಗೋಕಾಕ್‌ನಲ್ಲಿ ಉಪಚುನಾವಣೆ ಸನ್ನಿಹಿತ ? ಸಚಿವ ಜಾರಕಿಹೊಳಿ ಹೇಳಿದ್ದೇನು?

08:57 AM Apr 22, 2019 | Vishnu Das |

ಬೆಳಗಾವಿ : ಗೋಕಾಕ್‌ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ಯಾರನ್ನು ಬೆಂಬಲಿಸುತ್ತಾರೆ ಎನ್ನುವುದನ್ನು ನೋಡೋಣ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅವರು ಸಹೋದರ, ಶಾಸಕ ರಮೇಶ್‌ ಜಾರಕಿಹೊಳಿ ಅವರಿಗೆ ಸವಾಲೆಸೆದಿದ್ದಾರೆ.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್‌ ಜಾರಕಿಹೊಳಿ , ನಾವು ಇದುವರೆಗೆ ಗೋಕಾಕ್‌ನಲ್ಲಿ ರಾಜಕೀಯ ಚಟುವಟಿಗೆ ಮಾಡಿರಲಿಲ್ಲ. ಎಲ್ಲವನ್ನೂ ರಮೇಶ್‌ ಜಾರಕಿಹೊಳಿ ಮಾಡುತ್ತಿದ್ದರು. ಈಗ ಅವರು ನಮ್ಮೊಂದಿಗೆ ಇಲ್ಲದಿರುವ ಕಾರಣ ಹಳ್ಳಿ ಹಳ್ಳಿಯಲ್ಲೂ ಪ್ರಚಾರ ನಡೆಸುತ್ತಿದ್ದೇವೆ ಎಂದರು.

ರಮೇಶ್‌ ಜಾರಕಿಹೊಳಿ ಬೆಂಬಲಿಗರಿಗೆ ಬಿಜೆಪಿ ಬೆಂಬಲಿಸುವಂತೆ ಹೇಳಿರುವುದು ನಿಜ. ಇದು ನಮಗೆ ಮೊದಲೇ ಗೊತ್ತಿತ್ತು. ನಾವು ಲಖನ್‌ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪ್ರಚಾರ ನಡೆಸುತ್ತಿದ್ದೇವೆ. ಮುಂದಿನ ಉಪಚುನಾವಣೆಯಲ್ಲಿ ಲಖನ್‌ ಜಾರಕಿಹೊಳಿ ಅಭ್ಯರ್ಥಿಯಾಗಲಿದ್ದಾರೆ ಎಂದರು.

ರಮೇಶ್‌ ಜಾರಕಿಹೊಳಿ ವಿರುದ್ಧ ಪಕ್ಷ ಕ್ರಮ ಕೈಗೊಂಡರೂ, ಬಿಟ್ಟರೂ ಅಷ್ಟೇ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next