Advertisement

ಹಿಜಬ್- ಕೇಸರಿ ಶಾಲು ಸಂಘರ್ಷಕ್ಕೆ ಸರ್ಕಾರವೇ ಕಾರಣ : ಸತೀಶ್‌ ಜಾರಕಿಹೊಳಿ

07:13 PM Feb 08, 2022 | Team Udayavani |

ಬೆಳಗಾವಿ : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹಿಜಬ್- ಕೇಸರಿ ಶಾಲು ಸಂಘರ್ಷ ನಡೆಯುತ್ತಿದ್ದು, ಈ ಸಂಘರ್ಷ ನಡೆಯದಂತೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ಧಾರೆ.

Advertisement

ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್- ಕೇಸರಿ ಶಾಲು ಸಂಘರ್ಷಕ್ಕೆ ಬಿಜೆಪಿ ಸರ್ಕಾರವೇ ಕಾರಣ. 70 ವರ್ಷದ ಕಾಂಗ್ರೆಸ್‌ ಅಧಿಕಾರದಲ್ಲಿ ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದರು.

ಶಿವಮೊಗ್ಗದ ಸರಕಾರಿ ಪದವಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದ್ದು, ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ ಅವರು, ಹಿಜಾಬ್ ಕೇಸರಿ ಶಾಲು ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಈ ರೀತಿಯ ರಾಜಕೀಯ ಸರಿಯಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುತ್ತಿರುವುದು ದುರದೃಷ್ಟಕರ ಸಂಗತಿ ಎಂದರು.

ಇದನ್ನೂ ಓದಿ : ಹಿಜಾಬ್-ಕೇಸರಿ ಶಾಲು ವಿವಾದ: ವಿಚಾರಣೆ ಮುಂದೂಡಿದ ಹೈಕೋರ್ಟ್

Advertisement

Udayavani is now on Telegram. Click here to join our channel and stay updated with the latest news.

Next