Advertisement

ಸಚಿವಾಕಾಂಕ್ಷಿಗಳ ಆಸೆ ಈಡೇರಲಿ: ಸತೀಶ್‌

11:13 PM Jan 19, 2020 | Lakshmi GovindaRaj |

ಮೈಸೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿದೇಶ ಪ್ರವಾಸ ಮುಗಿಸಿ ಬಂದ ಕೂಡಲೇ ಸಚಿವ ಸ್ಥಾನದ ಆಕಾಂಕ್ಷಿಗಳ ಆಸೆ ಈಡೇರಲಿ ಎಂದು ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ವ್ಯಂಗ್ಯವಾಡಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವರು ಒಂದು ವರ್ಷದಿಂದ ಸಚಿವರಾಗಲು ಕಾಯುತ್ತಿದ್ದಾರೆ.

Advertisement

ಈ ಹಿಂದೆ ಕುಮಾರಸ್ವಾಮಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಸರ್ಕಾರವನ್ನು ಬೀಳಿಸಿ ಸಚಿವರಾಗಲು ಕಾಯುತ್ತಿದ್ದರು. ಬಿಜೆಪಿಯಲ್ಲಿ ಇಂತಹ ಪರಿಸ್ಥಿತಿ ಬರಲಿದೆ ಎಂದು ಮೊದಲೇ ಹೇಳಿದ್ದೆ. ಹೀಗಾಗಿ, ಯಡಿಯೂರಪ್ಪನವರು ವಿದೇಶ ಪ್ರವಾಸ ಮುಗಿಸಿ ಬಂದ ಕೂಡಲೇ ಅವರ ಆಸೆ ಈಡೇರಲಿ. ಅವರು ಬೇಗ ಸಚಿವರಾದರೆ ಒಳ್ಳೆಯದು, ನಾನೂ ಸಹ ಇದನ್ನೇ ಹಾರೈಸುತ್ತೇನೆಂದು ರಮೇಶ್‌ ಜಾರಕಿಹೋಳಿ ಸೇರಿ ಸಚಿವ ಸ್ಥಾನದ ಎಲ್ಲ ಆಕಾಂಕ್ಷಿಗಳಿಗೆ ಕುಟುಕಿದರು.

ಕೆಪಿಸಿಸಿಗೆ ನಾಲ್ಕು ಕಾರ್ಯಾಧ್ಯಕ್ಷ ಸ್ಥಾನದ ಸೃಷ್ಟಿಯ ಬಗ್ಗೆ ಚಿಂತನೆ ನಡೆದಿದ್ದು, ಜಾತಿ ಮತ್ತು ಪ್ರದೇಶವಾರು ಸಮತೋಲನ ಕಾಪಾಡಲು ಈ ಚಿಂತನೆ ನಡೆಸಲಾಗಿದೆ. ವಿಪಕ್ಷ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಒಬ್ಬರಿಗೇ ಇರಲಿ ಎಂದು ಹೇಳಿದ್ದೇನೆ.
-ಸತೀಶ್‌ ಜಾರಕಿಹೊಳಿ, ಮಾಜಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next