Advertisement

ಸಿಡಿ ಪ್ರಕರಣ : ಸಂತ್ರಸ್ತೆ ಹೇಳಿಕೆ ಮುಖ್ಯ

05:14 PM Mar 05, 2021 | Team Udayavani |

ಗೋಕಾಕ: ರಮೇಶ ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಹೇಳಿಕೆ ಅತಿ ಮುಖ್ಯ. ಪೊಲೀಸರು ತನಿಖೆ ನಡೆಸಬೇಕು. ಯುವತಿಗೆ ನೋಟಿಸ್‌ ನೀಡುವ ಮೂಲಕ ಕರೆಸಿ ವಿಚಾರಣೆ ಮಾಡಬೇಕು. ಬೇರೆಯಾರೇ ದೂರು ಕೊಟ್ಟರೂ ಅದು ಪ್ರಯೋಜನವಾಗಲ್ಲ, ಯುವತಿ ಹೇಳಿಕೆಯೇ ಪ್ರಮುಖವಾಗಿರುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

Advertisement

ಗುರುವಾರ ಸುದ್ದಿಗಾರರ ಜತೆ ಮಾತನಾಡಿ, ರಮೇಶ ಜಾರಕಿಹೊಳಿ ಯಾರ ಮಾತುಗಳನ್ನು ಕೇಳುವ ಸ್ಟೇಜ್‌ನಲ್ಲಿ ಇರಲಿಲ್ಲ. ಈ ಪರಿಸ್ಥಿತಿಯಲ್ಲಿ ಜಾರಕಿಹೊಳಿ ಕುಟುಂಬ ಒಂದೇ ಎಂದು ಹೇಳಲು ಆಗಲ್ಲ. ಗೋಕಾಕದಲ್ಲಿ ಪರಿಸ್ಥಿತಿ ಏನಿದೆ, ಜಾರಕಿಹೊಳಿ ಕುಟುಂಬವನ್ನು ಯಾರು ನಡೆಸುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ರಮೇಶ ಅವರು ವೈಯಕ್ತಿಕವಾಗಿ ಇದ್ದಾರೆ. ಅಳಿಯ ಅಂಬಿರಾವ ಪಾಟೀಲ ಮಾತು ಬಿಟ್ಟರೆ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಪಕ್ಷ ಯಾವುದೇ ಇದ್ದರೂ ಇಂತಹ ಘಟನೆಗಳು ನಡೆಯಬಾರದು. ಹಾಗೆ ಏನಾದರೂ ಇದ್ದರೆ ನೇರವಾಗಿ ಪೊಲೀಸ್‌ ಠಾಣೆಗೆ ದೂರು ನೀಡಿ, ತನಿಖೆ ನಡೆಸುವಂತೆ ಆಗ್ರಹಿಸಬೇಕು. ಅದನ್ನು ಬಿಟ್ಟು ಇಂತಹ ಪ್ರಕರಣಗಳನ್ನು ರಸ್ತೆಗೆ ತರಬಾರದು.  ಸಿಡಿ ಪ್ರಕರಣ ಮುಗಿದ ವಿಚಾರ. ಈಗಾಗಲೇ ರಮೇಶ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಬಂಧಪಟ್ಟವರಿಗೆ ಪೊಲೀಸರು ನೋಟಿಸ್‌ ನೀಡಿ, ತನಿಖೆ ನಡೆಸಬೇಕು. ಆಗ ಸತ್ಯಾಂಶ ಹೊರಬರಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next