Advertisement

Karnataka Polls; ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ ಸತೀಶ ಜಾರಕಿಹೊಳಿ

03:43 PM Apr 20, 2023 | Team Udayavani |

ಬೆಳಗಾವಿ: ಮೌಢ್ಯದ ವಿರುದ್ಧ ತೊಡೆ ತಟ್ಟಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದರು.

Advertisement

ಸಮಾಜದಲ್ಲಿ ಮೌಡ್ಯದ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಸತೀಶ ಜಾರಕಿಹೊಳಿ ಅವರು ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುವ ಮೂಲಕ ಮತ್ತೊಮ್ಮೆ ತಮ್ಮ ವೈಚಾರಿಕ ಚಿಂತನೆಯನ್ನು ಸಾಬೀತುಪಡಿಸಿದ್ದಾರೆ. ನಾಮಪತ್ರ ಸಲ್ಲಿಸಲು ಅಪಾರ ಸಂಖ್ಯೆಯಲ್ಲಿ ಜನರನ್ನು ಕರೆತರದೆ ಮೆರವಣಿಗೆ ನಡೆಸದೆ ಕೇವಲ ಐದು ಜನರೊಂದಿಗೆ ತಹಶೀಲ್ದಾರ ಕಚೇರಿಗೆ ಬಂದು ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ:ನಮ್ಮ ಕಥೆಗೆ ROSY ಟೈಟಲ್‌ ಬೇಕೇ ಬೇಕು: ಯೋಗಿ ಮತ್ತು ತಂಡದ ಮಾತು

ಯಮಕನಮರಡಿ ವಿಧಾನಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ, ಈ ಬಾರಿಯೂ ಯಾವುದೇ ಆಡಂಬರ ಇಲ್ಲದೆ ನೇರವಾಗಿ ಕಾರಿನಲ್ಲಿ ಬಂದು ಐದು ಜನರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next