Advertisement

ಉನ್ನತ ಹುದ್ದೆಗಳಿಗೆ ಆರ್ ಎಸ್ ಎಸ್ ಕಾರ್ಯಕರ್ತರ ನೇಮಕದ ಯತ್ನ ನಡೆದಿದೆ : ಸತೀಶ್ ಜಾರಕಿಹೊಳಿ

05:31 PM Apr 24, 2022 | Team Udayavani |

ಕೊಪ್ಪಳ: ಉನ್ನತ ಹುದ್ದೆಗಳಿಗೆ ಆರ್ ಎಸ್ ಎಸ್ ಕಾರ್ಯಕರ್ತರ ನೇಮಿಸುವ ಯತ್ನ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದರು.

Advertisement

ಕುಷ್ಟಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಇಂದು ಬಲಂಪಂಥಿಯರಿಗೆ ಉನ್ನತ ಹುದ್ದೆ ನೀಡುವ ಯತ್ನ ನಡೆದಿದೆ ಮತ್ತೆ ಮನುವಾದ ಜಾರಿಗೆ ತರಲು ಹೊರಟಿದ್ದಾರೆ. ಪಿಎಸ್ಐ ನೇಮಕಾತಿಯಲ್ಲಿ ಅಕ್ರಮದಲ್ಲಿ ತಪ್ಪು ಮಾಡಿದವರಿಗೆ ಕಾನೂನು ಶಿಕ್ಷೆಯಾಗುತ್ತದೆ ಎಂದರು.

ಇದನ್ನೂ ಓದಿ:ಬಿಜೆಪಿ ಸರ್ಕಾರದಿಂದ ವಿಷಬೀಜ ಬಿತ್ತುವ ಕೆಲಸ: ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ಸಿಎಂ ರೇಸ್ ಪೈಪೋಟಿ ನಡೆಯುತ್ತದೆ ಎಂದು ಜೋಶಿ ಹೇಳಿಕೆ ವಿಚಾರಕ್ಕೆ ಪ್ರತಿಕಗರಿಯೆ ನೀಡಿದ ಅವರು, ಮುಂದಿನ ಚುನಾವಣೆಯ ನಂತರ ಸಿಎಂ ರೇಸ್ ನಮ್ಮ ಪಕ್ಷದಲ್ಲಿಯೂ ಇದೆ. ಬಿಜೆಪಿಯಲ್ಲಿಯೂ ಇದೆ. ಜೋಶಿಯವರು ಸಹ ಸಿಎಂ ರೇಸ್ ನಲ್ಲಿದ್ದಾರೆ. ಕಾಂಗ್ರೆಸ್ ಸಂವಿಧಾನ ರಕ್ಷಣೆ ಮುಂಚೂಣಿಯಲ್ಲಿದೆ ಎಂದರು.

ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸವಾಗಿವೆ. ಸಹಜವಾಗಿ ಅವರನ್ನು ಎಲ್ಲ ಕ್ಷೇತ್ರಕ್ಕೆ ಆಹ್ವಾನಿಸಲಾಗುತ್ತಿದೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next