Advertisement

ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಪ್ರಕರಣ: ಏನಿದು ಬೇಗೂರು ಕೆರೆ ಶಿವನ ಮೂರ್ತಿ ವಿವಾದ?

04:13 PM Aug 12, 2021 | Team Udayavani |

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರ ಮನೆಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ ಘಟನೆ ಕಳೆದ ರಾತ್ರಿ ನಡೆದಿದೆ. ಇದರ ಬೆನ್ನಲ್ಲೇ ಶಿವನ ಮೂರ್ತಿ ವಿವಾದದ ಬಗ್ಗೆ ಸುದ್ದಿಯಾಗುತ್ತಿದೆ.

Advertisement

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದ್ದರು. ಎರಡು ವರ್ಷಗಳಲ್ಲಿ ಕಾಮಗಾರಿ ಮುಗಿಸಲು ಸೂಚನೆ ನೀಡಲಾಗಿತ್ತು. ಆದರೆ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಬಿಬಿಎಂಪಿ ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ವಿಚಾರಣೆ ನಡೆಸಿದ್ದ ಹೈಕೋರ್ಟ್ ಇದಕ್ಕೆ ತಡೆ ತಂದಿತ್ತು. ಅದಲ್ಲದೆ ನಿರ್ಮಾಣ ಹಂತದಲ್ಲಿದ ಶಿವನ ಮೂರ್ತಿಯನ್ನು ಟರ್ಪಾಲಿನಿಂದ ಮುಚ್ಚಲಾಗಿತ್ತು. ಆದರೆ ಬುಧವಾರ ಕೆಲ ಹಿಂದೂಪರ ಸಂಘಟನೆ ಕಾರ್ಯಕರ್ತರು ವಿಗ್ರಹಕ್ಕೆ ಹಾಕಿದ್ದ ಟರ್ಪಾಲು ಹೊದಿಕೆಯನ್ನು ತೆರವುಗೊಳಿಸಿದ್ದರು. ಪೊಲೀಸರು ಆಗಮಿಸಿ ಕೆಲವರನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ:ಶಾಸಕ ಸತೀಶ್ ರೆಡ್ಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

Advertisement

ಇದೇ ವೇಳೆ ಮಧ್ಯಪ್ರವೇಶಿಸಿದ್ದ ಶಾಸಕ ಸತೀಶ್ ರೆಡ್ಡಿ,ಹಿಂದೂಗಳ ಭಾವನೆಯನ್ನು ಅನ್ಯ ಕೋಮಿನವರು ಗೌರವಿಸಿ ಸಹಕಾರ ನೀಡಬೇಕು. ದೇಶದ ಎಲ್ಲ ನದಿ ತೀರದಲ್ಲಿ ಶಿವನ ದೇಗುಲಗಳು ಎದ್ದು ನಿಂತಿವೆ. ಇದರಿಂದಾಗಿ ಆ ಪ್ರದೇಶಕ್ಕೆ ಹೆಸರು ಬರುತ್ತದೆ. ಹೀಗಾಗಿ ನಾಗನಾಥೇಶ್ವರ ದೇವಸ್ಥಾನ ಇತಿಹಾಸ ಅರಿತು ಈ ಕ್ಷೇತ್ರದ ಅಭಿವೃದ್ಧಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದ್ದರು. ಅದಲ್ಲದೆ ಪೊಲೀಸ್ ವಶದಲ್ಲಿದ್ದ ಹುಡುಗರನ್ನೂ ಬಿಡುಗಡೆ ಮಾಡಿಸಿದ್ದರು ಎನ್ನಲಾಗಿದೆ.

ಅದೇ ದಿನ ರಾತ್ರಿ ಸತೀಶ್ ರೆಡ್ಡಿ ಮನೆಯಲ್ಲಿ ಪಾರ್ಕ್ ಮಾಡಿದ್ದ ಎರಡು ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಥಾರ್ ಮತ್ತು ಫಾರ್ಚುನರ್ ಕಾರುಗಳು ಸುಟ್ಟು ಹೋಗಿದೆ. ಈ ಘಟನೆಗೂ ಶಿವನ ಮೂರ್ತಿ ಪ್ರಕರಣಕ್ಕೂ ಸಂಬಂಧವಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next