Advertisement

ಶನಿವಾರಸಂತೆ: ವಿಜಯ ವಿನಾಯಕ ದೇಗುಲ ವಾರ್ಷಿಕೋತ್ಸವ

08:33 PM Apr 28, 2019 | sudhir |

ಶನಿವಾರಸಂತೆ: ಪಟ್ಟಣದ ತ್ಯಾಗರಾಜ ಕಾಲೋನಿಯಲ್ಲಿರುವ ವಿಜಯ ವಿನಾಯಕ ದೇವಾಲಯದ 4ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವ ಅದ್ದೂರಿಯಾಗಿ ಮತ್ತು ಶ್ರದ್ದಾಭಕ್ತಿಯಿಂದ ನೆರವೇರಿತು. ಪೂಜಾ ಮಹೋತ್ಸವದ ಅಂಗವಾಗಿ ಮಹಿಳೆಯರು ಬೆಳಗ್ಗೆ 7 ಗಂಟೆಗೆ ಪಟ್ಟಣದ ಮುಖ್ಯ ಬೀದಿಯಲ್ಲಿ ವಾದ್ಯಾಗೋಷ್ಠಿಯೊಂದಿಗೆ ಕಳಸವನ್ನು ಮೆರವಣಿಗೆಯಲ್ಲಿ ತಂದು ದೇವರಿಗೆ ಅಭಿಷೇಕ ಮಾಡುವ‌ ಮೂಲಕ ದೇವಾಲಯದಲ್ಲಿ ವಾರ್ಷಿಕ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡ ಲಾಯಿತು.

Advertisement

ಪುತ್ತೂರಿನ ಕಮ್ಮೆಂಜಿಯ ತಂತ್ರಿ ಸುಬ್ರಹ್ಮಣ್ಯ ಬಳ್ಳಕುರಾಯ ಹಾಗೂ ದೇವಾಲಯದ ಅರ್ಚಕ ಮಂಜುನಾಥ ಶರ್ಮ ಅವರ ನೇತೃತ್ವದಲ್ಲಿ ಬೆಳಗ್ಗೆ 10 ಗಂಟೆಯಿಂದ ವಿಜಯ ವಿನಾಯಕ ದೇವಾಲಯದಲ್ಲಿ ಮಹಾ ಗಣಪತಿ ಹೋಮ, ಕಳಶ ಪೂಜೆ, ಕಲಶಾಭಿಷೇಕ ಪೂಜೆಯನ್ನು ನೆರವೇರಿಸಲಾಯಿತು. ನಂತರ ಶ್ರೀವಿನಾಯಕ ಸ್ವಾಮಿಗೆ 108 ಸೀಯಾಳ ಅಭಿಷೇಕ ಮಾಡಿಸಲಾಯಿತು.

ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ಸಂಜೆ 5 ಗಂಟೆಗೆ ದೇವಾಲಯದಲ್ಲಿ ರಂಗಪೂಜೆ ನೆರವೇರಿಸಿದ ಬಳಿಕ ದೇವರಿಗೆ ಮಹಾ ಮಂಗಳಾರತಿ ಮಾಡಲಾಯಿತು. ದೇವಾಲಯದ ವಾರ್ಷಿಕ ಪೂಜಾ ಮಹೋತ್ಸವದಲ್ಲಿ ನೂರಾರು ಭಕ್ತರು ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ಶ್ರದ್ದಾಭಕ್ತಿಯಿಂದ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇವಾಲಯ ಸಮಿತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತು. ಈ ಸಂದರ್ಭದಲ್ಲಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ಎಸ್‌.ಆರ್‌.ಮಧು, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next