Advertisement

ಸಾಹಿತಿ ಚಂದ್ರಶೇಖರ್ ಕಂಬಾರರ ಪತ್ನಿ ಸತ್ಯಭಾಮ ನಿಧನ: ಸಿಎಂ ಸಂತಾಪ

11:51 AM Jan 18, 2022 | Team Udayavani |

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ಅವರು ವಿಧಿವಶರಾಗಿದ್ದಾರೆ.

Advertisement

ಸತ್ಯಭಾಮ ಚಂದ್ರಶೇಖರ್ ಕಂಬಾರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸತ್ಯಭಾಮ ಅವರು ಚಂದ್ರಶೇಖರ ಕಂಬಾರ ಅವರ ಪ್ರೇರಣಾ ಶಕ್ತಿಯಾಗಿದ್ದರು. ಅವರಿಗೆ ಅಪಾರವಾದ ಓದಿನ ಹವ್ಯಾಸವಿತ್ತು. ಹೀಗಾಗಿ ಅವರು ಸಾಹಿತ್ಯ ಕ್ಷೇತ್ರದಲ್ಲಿನ ಬೆಳವಣಿಗೆ ಕುರಿತು ಆಸಕ್ತಿ ಹೊಂದಿದ್ದರು.  ಸತ್ಯಭಾಮ ಅವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಕೋರುತ್ತೇನೆ ಎಂದು ಸಿಎಂ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ:ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ಕೋವಿಡ್ ಪ್ರಕರಣ ಪತ್ತೆ

ಎಚ್ ಡಿಕೆ ಸಂತಾಪ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ಚಂದ್ರಶೇಖರ ಕಂಬಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ. ಸತ್ಯಭಾಮ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರರು, ಮತ್ತವರ ಕುಟುಂಬದ ಸದಸ್ಯರಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next