Advertisement

ಟ್ರೇಲರ್‌ ನಲ್ಲಿ ಸತ್ಯ ದರ್ಶನ

05:57 PM Oct 20, 2023 | Team Udayavani |

ಯತಿರಾಜ್‌ ನಿರ್ದೇಶನದ “ಸತ್ಯಂ ಶಿವಂ’ ಚಿತ್ರದ ಟ್ರೇಲರ್‌ ಬಿಡುಗಡೆ ಸಮಾರಂಭ ಹಾಗೂ ಎರಡು ಹಾಡುಗಳ ಪ್ರದರ್ಶನ ಇತ್ತೀಚೆಗೆ ನಡೆಯಿತು. ನಿರ್ದೇಶಕ ದಯಾಳ್‌ ಪದ್ಮನಾಭನ್‌ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

Advertisement

ಟ್ರೇಲರ್‌ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ಯತಿರಾಜ್‌ , “ಸತ್ಯಂ ಶಿವಂ’ ಎಂದರೆ ಎರಡು ಪಾತ್ರಗಳ ಹೆಸರಲ್ಲ. ನಮ್ಮೊಳಗಿರುವ ಕೆಟ್ಟದ್ದನ್ನು ಹೊರಗೆ ಹಾಕಿ ನಿಷ್ಕಲ್ಮಶವಾದಾಗ ಸತ್ಯದ ದರ್ಶನವಾಗಿ ಶಿವನ ಅನುಭೂತಿಯಾಗುತ್ತದೆ. ಇದೇ ಕಥೆಯ ಸಾರಾಂಶ. ನಮ್ಮ ಚಿತ್ರದಲ್ಲಿ ಸಸ್ಪೆನ್ಸ್‌, ಥ್ರಿಲ್ಲರ್‌, ಸೆಂಟಿಮೆಂಟ್‌ ಎಲ್ಲವೂ ಇದೆ. ನಿರ್ಮಾಪಕರೂ ಆಗಿರುವ ಬುಲೆಟ್‌ ರಾಜು ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ “ಸತ್ಯಂ ಶಿವಂ’ ಉತ್ತಮವಾಗಿ ಬಂದಿದೆ ಎಂದರು.

ಯತಿರಾಜ್‌ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಕಥೆ ಹಾಗೂ ನನ್ನ ಪಾತ್ರ ಎರಡೂ ಚೆನ್ನಾಗಿದೆ. ಯತಿರಾಜ್‌ ಅವರು ಹೇಳಿದ ಹಾಗೆ ಒಂದೇ ಹಂತದಲ್ಲಿ ಈ ಚಿತ್ರದ ಚಿತ್ರೀಕರಣ ಮುಗಿಸಿದ್ದಾರೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ಬುಲೆಟ್‌ ರಾಜು ತಿಳಿಸಿದರು.

ಸಂಗೀತ ನಿರ್ದೇಶಕ ವಿ.ಮನೋಹರ್‌ ಹಾಡುಗಳ ಹಾಗೂ ಹಾಡಿದವರ ಪರಿಚಯ ಮಾಡಿಸಿ ದರು. ಸಾಹಸ ನಿರ್ದೇಶನದ ಬಗ್ಗೆ ಥ್ರಿಲ್ಲರ್‌ ಮಂಜು ಸಾಹಸ ಸನ್ನಿವೇಶ ಹಾಗೂ ಸಿನಿಮಾ ಮೂಡಿಬಂದ ಬಗ್ಗೆ ಮಾತನಾಡಿದರೆ, ಛಾಯಾ ಗ್ರಾಹಕ ವಿದ್ಯಾ ನಾಗೇಶ್‌ ಮತ್ತು ನೃತ್ಯ ನಿರ್ದೇಶಕ ಫೈವ್‌ ಸ್ಟಾರ್‌ ಗಣೇಶ್‌ ಕೂಡಾ ತಮ್ಮ ಕೆಲಸಗಳ ಬಗ್ಗೆ ಹಂಚಿಕೊಂಡರು.

ಚಿತ್ರದಲ್ಲಿ ನಟಿಸಿರುವ ಸಂಜನಾ ನಾಯ್ಡು, ಮೈಕೋ ನಾಗರಾಜ್‌, ಅರವಿಂದ್‌ ರಾವ್‌, ಸಂಗೀತಾ, ಸುಂದರಶ್ರೀ, ತೇಜಸ್ವಿನಿ, ತನುಜಾ ಮುಂತಾದ ಕಲಾವಿದರು ಚಿತ್ರದ ಕುರಿತು ಮಾತನಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next