Advertisement

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

10:16 PM Jul 06, 2024 | Team Udayavani |

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಆಪ್‌ ಮಾಜಿ ಸಚಿವ ಸತ್ಯೇಂದ್ರ ಜೈನ್‌ಗೆ ಮತ್ತೂಂದು ಸಂಕಷ್ಟ ಎದುರಾಗಿದೆ.

Advertisement

7 ಕೋಟಿ ರೂ. ಲಂಚ ತೆಗೆದುಕೊಂಡಿರುವ ಆರೋಪ ಹೊಂದಿರುವ ಜೈನ್‌ ಅವರ ವಿರುದ್ಧ ತನಿಖೆ ನಡೆಸಲು ನವದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೆನಾ ಅನುಮತಿ ನೀಡಿದ್ದಾರೆ.

2018-19ರಲ್ಲಿ ದೆಹಲಿಯಾದ್ಯಂತ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಯೋಜನೆಯಲ್ಲಿ ಭಾರತ ಎಲೆಕ್ಟ್ರಾನಿಕ್ಸ್‌ ಕಂಪನಿಯ (ಬಿಇಎಲ್‌) ಅಧಿಕಾರಿಗಳ ಮೂಲಕ ಮಾಜಿ ಸಚಿವ ಜೈನ್‌ 7 ಕೋಟಿ ರೂ. ಲಂಚ ತೆಗೆದುಕೊಂಡಿದ್ದಾರೆ ಎಂಬ ದೂರು ದಾಖಲಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ ಆಪ್‌ ಸಚಿವೆ ಆತಿಶಿ, ಕೇಂದ್ರ ಸರ್ಕಾರ ಕೇಜ್ರಿವಾಲ್‌ ನಂತರ ಆಪ್‌ ಮೇಲೆ ಮತ್ತೂಂದು ಸುಳ್ಳು ಪ್ರಕರಣ ದಾಖಲಿಸಿದೆ ಎಂದು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next