ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಸೋಮವಾರ ಸಫªರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯದಿಂದ ತೀವ್ರ ಬಳಲಿರುವ ಜೈನ್ 35 ಕೆಜಿಗಳಷ್ಟು ತೂಕ ಕಡಿಮೆಯಾಗಿ ಗುರುತೇ ಸಿಗದಂತೆ ಬದಲಾಗಿದ್ದು ಅವರ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದೆ. ಜೈಲಿನಲ್ಲಿ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದ್ದರೂ ಆರೋಗ್ಯ ಕ್ಷೀಣಿಸಿದ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಏತನ್ಮಧ್ಯೆ, ಜೈನ್ಗೆ ಜಾಮೀನು ನಿರಾಕರಿಸಿದ್ದರ ವಿರುದ್ಧ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ಗೆ ಜೈನ್ ಪರ ವಕೀಲರು ಮನವಿ ಮಾಡಿದ್ದಾರೆ. ಜೈನ್ ತೀವ್ರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವುದನ್ನು ಗಮನಿಸಿದ ಸುಪ್ರೀಂಕೋರ್ಟ್, ಅರ್ಜಿಯನ್ನು ಆಲಿಸುವಂತೆ ರಜಾಕಾಲದ ಪೀಠಕ್ಕೆ ಸೂಚನೆ ನೀಡಿದೆ.
Advertisement
ಸತ್ಯೇಂದ್ರ ಜೈನ್ ಗುರುತು ಸಿಗದಷ್ಟು ಬದಲು!
09:34 PM May 22, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.