Advertisement

ಪ್ರಥಮ ಪ್ರಯತ್ನದಲ್ಲೆ ಪಿಎಸ್‍ಐ ಆದ ಕಂಡಕ್ಟರ್ ಮಗ

06:30 PM Jan 24, 2022 | Team Udayavani |

ಸವದತ್ತಿ : ತಾಲೂಕಿನ ಚಿಕ್ಕುಂಬಿ ಗ್ರಾಮದ ಅರುಣ ಮೇಟಿ ಮೊದಲ ಪ್ರಯತ್ನದಲ್ಲಿಯೇ ರಾಜ್ಯಕ್ಕೆ 75 ನೇ ರ‍್ಯಾಂಕ್ ಪಡೆದು ಪಿಎಸ್‍ಐ ಆಗಿ ಆಯ್ಕೆಯಾಗಿದ್ದಾರೆ.

Advertisement

ಬಡ ಕುಟುಂಬದಲ್ಲಿ ಜನಿಸಿದ ಇವರು, ಗ್ರಾಮೀಣ ಭಾಗದಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದು ನಂತರ ಪಿಯು ವಿಜ್ಞಾನದಲ್ಲಿ ಶೇ. 80 ರಷ್ಟು ಅಂಕ ಗಳಿಸಿ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಯಾಗಲು ಬಿ.ಎ ಪದವಿ ಪಡೆದಿದ್ದಾರೆ.

ಇವರ ತಂದೆ ಕಲ್ಲಪ್ಪ ಸಾರಿಗೆ ಸಂಸ್ಥೆಯ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಆಯ್ಕೆಗೆ ಗ್ರಾಮದ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಸವದತ್ತಿಯ ಮಹಿಳಾ ಪೇದೆ ಈಗ ಪಿಎಸ್‍ಐ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next