Advertisement

ಒಂದೇ ವಿಮಾನದಲ್ಲಿ ಸವದಿ, ರಮೇಶ, ಅಂಬಿರಾವ ಪ್ರಯಾಣ!

11:39 PM Sep 29, 2019 | Lakshmi GovindaRaju |

ಬೆಳಗಾವಿ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಗೋಕಾಕನ ಅನರ್ಹ ಶಾಸಕ ರಮೇಶ ಜಾರಕಿಹೊಳಿ, ಅಳಿಯ ಅಂಬಿರಾವ ಪಾಟೀಲ ಅವರು ಒಂದೇ ವಿಮಾನದಲ್ಲಿ ಭಾನುವಾರ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

Advertisement

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಉಭಯ ನಾಯಕರು ಪ್ರಯಾಣ ಬೆಳೆಸಿದರು. ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ ರಮೇಶ ಜಾರಕಿಹೊಳಿ, ವಿಮಾನ ಏರಿದರು. ಇದೇ ಮೊದಲ ಬಾರಿ ಅಳಿಯ ಅಂಬಿರಾವ ಪಾಟೀಲ ಅವರನ್ನು ಕರೆದುಕೊಂಡು ಬೆಂಗಳೂರಿಗೆ ಹೊರಟಿ ರುವ ಅನರ್ಹ ಶಾಸಕ ರಮೇಶ ಜಾರಕಿಹೊಳಿ ನಡೆ ಈಗ ಚರ್ಚೆಗೆ ಗ್ರಾಸವಾಗಿದೆ.

ಅಲ್ಲದೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರೊಂದಿಗೆ ತೆರಳಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸುಪ್ರೀಂಕೋರ್ಟ್‌ ತೀರ್ಪು ಬಂದ ಬಳಿಕ ಯಾವ ಪಕ್ಷಕ್ಕೆ ಹೋಗುವುದು ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ರಮೇಶ ಹೇಳುತ್ತಿದ್ದು, ಹೆಚ್ಚಾಗಿ ಬಿಜೆಪಿ ವಲಯದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಶನಿವಾರವಷ್ಟೇ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರೊಂದಿಗೂ ಗೌಪ್ಯ ಚರ್ಚೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next