Advertisement

Savanuru ಬಸ್ ಚಾಲಕನಿಗೆ ಹಲ್ಲೆ: ಪ್ರಕರಣ ದಾಖಲು

11:43 PM Aug 23, 2024 | Team Udayavani |

ಸವಣೂರು: ಬಸ್‌ ನಿಲ್ಲಿಸಿಲ್ಲವೆಂದು ಚಾಲಕನಿಗೆ ಕೆಎಸ್‌ಆರ್‌ಟಿಸಿ ಸಿಬಂದಿ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ಶುಕ್ರವಾರ ನಡೆದಿದೆ.

Advertisement

ಸವಣೂರು ಪೆಟ್ರೋಲ್‌ ಪಂಪ್‌ ಬಳಿಯ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಸಿಬಂದಿ ನಾರಾಯಣ ಅವರು ಚಾಲಕ ಭರತ್‌ಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಸ್‌ ಸಹಪ್ರಯಾಣಿಕರು ಘಟನೆಯ ವೀಡಿಯೋ ಚಿತ್ರೀಕರಿಸಿದ್ದು, ವೈರಲ್‌ ಆಗಿದೆ. ಚಾಲಕ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖ ಲಾಗಿದ್ದು, ಅವರು ನೀಡಿದ ದೂರಿನಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಲ್ಲೆ ಖಂಡಿಸಿ ಬಸ್‌ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟಿಸಲು ಸಿಬಂದಿ ನಿರ್ಧರಿಸಿದ್ದರು. ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಸಿಬಂದಿ ಪ್ರತಿಭಟನೆಯಿಂದ ಹಿಂದೆ ಸರಿದರು.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next