Advertisement

Savanuru ಪತಿಯ ಅಗಲಿಕೆಯ ನೋವು: ಆತ್ಮಹತ್ಯೆ ಮಾಡಿಕೊಂಡ ಪತ್ನಿ

01:09 AM Sep 05, 2023 | Team Udayavani |

ಸವಣೂರು: ಪತಿಯ ಅಗಲುವಿಕೆಯ ನೋವಿನಿಂದ ಹೊರಬರಲಾರದೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಸವಣೂರು ಗ್ರಾಮದ ಪೆರಿಯಡ್ಕ ನಿವಾಸಿ ದಿ| ದಿನೇಶ್‌ ಪೆರಿಯಡ್ಕ ಅವರ ಪತ್ನಿ ರೂಪಾ (30) ಆತ್ಮಹತ್ಯೆ ಮಾಡಿಕೊಂಡವರು. ಪತಿಯ ನಿಧನದ ಬಳಿಕ ತವರು ಮನೆ ಕೊಡಗು ಜಿಲ್ಲೆಯ ಪೆರಾಜೆಯ ಹೊದ್ದೆಟ್ಟಿಗೆ ಹೋಗಿದ್ದರು. ಅಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೂಪಾ ಅವರು ಮೂಲತಃ ಕೊಡಗು ಜಿಲ್ಲೆಯ ಪೆರಾಜೆಯ ಹೊದ್ದೆಟ್ಟಿಯವರು. ಎರಡು ವರ್ಷಗಳ ಹಿಂದೆ ಅವರನ್ನು ಸವಣೂರಿನ ಪೆರಿಯಡ್ಕದ ದಿನೇಶ್‌ ಅವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ದಿನೇಶ್‌ ಪೆರಿಯಡ್ಕ ಅವರು ಅನಾರೋಗ್ಯದಿಂದ ಆ. 7ರಂದು ನಿಧನ ಹೊಂದಿದ್ದರು. ಇದಾದ ಬಳಿಕ ರೂಪಾ ತವರು ಮನೆ ಪೆರಾಜೆಗೆ ಬಂದಿದ್ದರು. ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚೂಡಿದಾರ ಶಾಲು ಬಳಸಿ ನೇಣಿಗೆ ಶರಣಾಗಿದ್ದಾರೆ.

ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕರೆತರಲಾಗಿದ್ದು,ಕೊಡಗು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next