Advertisement

ಉಡುಪಿ: ಸಾರ್ವಕರ್‌ ಫ್ಲೆಕ್ಸ್‌: ಬಿಜೆಪಿ ಯುವ ಮೋರ್ಚದಿಂದ ಕಾಂಗ್ರೆಸ್‌ ಕಚೇರಿ ಮುತ್ತಿಗೆ ಯತ್ನ

12:42 PM Aug 17, 2022 | Team Udayavani |

ಉಡುಪಿ: ಬ್ರಹ್ಮಗಿರಿ ವೃತ್ತದಲ್ಲಿ ಹಾಕಿರುವ ಸಾರ್ವಕರ್‌ ಫ್ಲೆಕ್ಸ್‌ಗೆ ಬಿಜೆಪಿ ಯುವ ಮೋರ್ಚ ಸದಸ್ಯರು ಪ್ರತ್ಯೇಕವಾಗಿ ಮಾಲಾರ್ಪಣೆ ಮಾಡಿ, ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.

Advertisement

ಬುಧವಾರ ಮುಂಜಾನೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಯಶ್‌ ಪಾಲ್ ಸುವರ್ಣ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಾರ್ವಕರ್‌ ಫ್ಲೆಕ್ಸ್‌ಗೆ ಮಾಲಾರ್ಪಣೆ ಮಾಡಿದ ಬೆನ್ನಲ್ಲೇ ಬಿಜೆಪಿ ಯುವ ಮೋರ್ಚ ಸದಸ್ಯರು ಪ್ರತ್ಯೇಕವಾಗಿ ಸಾರ್ವಕರ್‌ ಫ್ಲೆಕ್ಸ್‌ಗೆ ಮಾಲಾರ್ಪಣೆ ಮಾಡಿ ಸಮೀಪದಲ್ಲಿ ಇರುವ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಯುವ ಮೋರ್ಚ ಸದಸ್ಯರು ಕಾಂಗ್ರೆಸ್‌ ಕಚೇರಿ ಮುಂದೆ ಸಾರ್ವಕರ್‌ ಪರ ಘೋಷಣೆ ಕೂಗಿದರು. ಪರಿಸ್ಥಿತಿಯನ್ನು ಅರಿತ ಪೊಲೀಸರು, ಕೂಡಲೇ ಸ್ಥಳಕ್ಕೆ ಧಾವಿಸಿ, ಪ್ರತಿಭಟನಾ ನಿರತ ಸದಸ್ಯರನ್ನು ವಾಪಾಸ್‌ ಹೋಗುವಂತೆ ಮನವಿ ಮಾಡಿದರು. ಕೆಲ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು.

ಸದ್ಯ ಬ್ರಹ್ಮಗಿರಿ ವೃತ್ತ ವಿವಾದದ ಕೇಂದ್ರ ಬಿಂದುವಾಗಿದೆ. ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next