Advertisement

ಸಾವಿತ್ರಿಗೆ ವಿಜಯ ರಾಘವೇಂದ್ರ ಹೀರೋ

12:11 PM Nov 17, 2020 | Suhan S |

ಇತ್ತೀಚೆಗಷ್ಟೇ ನಟ ವಿಜಯ ರಾಘವೇಂದ್ರ ಅಭಿನಯದ 50ನೇ ಚಿತ್ರ “ಸೀತಾರಾಮ್‌ ಭಿನೋಯ್‌ಕೇಸ್‌ ನಂ.18′ ಚಿತ್ರದ ಟೈಟಲ್‌ ಮತ್ತು ಫ‌ಸ್ಟ್‌ ಲುಕ್‌ ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ಪೊಲೀಸ್‌ ಆಫೀಸರ್‌ ಆಗಿ ಕಾಣಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ, ವಿಜಯ ರಾಘವೇಂದ್ರ ಮತ್ತೂಂದು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿಕಾಣಿಸಿಕೊಳ್ಳುತ್ತಿದ್ದಾರೆ.

Advertisement

ಅಂದಹಾಗೆ, ಆ ಚಿತ್ರದ ಹೆಸರು “ಸಾವಿತ್ರಿ’. ಹಿರಿಯ ನಟಿ ತಾರಾ ಅನುರಾಧ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ “ಸಾವಿತ್ರಿ’ ಚಿತ್ರದ ಶೀರ್ಷಿಕೆಯನ್ನು ಇತ್ತೀಚೆಗೆ ಚಿತ್ರತಂಡ ಘೋಷಿಸಿತ್ತು. ಇದೀಗ ಚಿತ್ರದ ಮತ್ತೂಂದು ಪ್ರಮುಖ ಪಾತ್ರಕ್ಕೆ ನಟ ವಿಜಯ ರಾಘವೇಂದ್ರ ಅವರ ಹೆಸರನ್ನು ಚಿತ್ರತಂಡ ಫೈನಲ್‌ ಮಾಡಿದೆ. “ಪಿಎನ್‌ಪಿ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ಮೂಲತಃ ಸಾಫ್ಟ್ವೇರ್‌ ಉದ್ಯೋಗಿಯಾಗಿರುವ ಪ್ರಶಾಂತ್‌ಕುಮಾರ್‌ (ಹೀಲಲ್ಲಿಗೆ) ನಿರ್ಮಿಸುತ್ತಿರುವ “ಸಾವಿತ್ರಿ’ ಚಿತ್ರದಲ್ಲಿ ನಟ ವಿಜಯ ರಾಘವೇಂದ್ರ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಹಿಂದೆ “ಉಯ್ಯಾಲೆ’ ಚಿತ್ರವನ್ನು ನಿರ್ದೇಶಿಸಿದ್ದ ಎಸ್‌. ದಿನೇಶ್‌ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರದ ಬಹುತೇಕ ಪ್ರೀ-ಪ್ರೊಡಕ್ಷನ್‌ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೇ ನ.19 ರಿಂದ ಬೆಂಗಳೂರು ಸುತ್ತಮುತ್ತ ಸುಮಾರು45 ದಿನಗಳಕಾಲ ಚಿತ್ರದ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಂಡಿದೆ.

ಇನ್ನು ಈ ಚಿತ್ರಕ್ಕೆ ಚಿತ್ರ ಸಾಹಿತಿ ಹೃದಯ ಶಿವ, ಸಂಭಾಷಣೆ ಮತ್ತು ಗೀತ ರಚನೆಯ ಜೊತೆಗೆ ಮೊದಲ ಬಾರಿಗೆ ಸಂಗೀತವನ್ನೂ ಸಂಯೋಜಿಸುತ್ತಿದ್ದಾರೆ. ಹಿರಿಯ ನಟಿ ತಾರಾ, ವಿಜಯ ರಾಘವೇಂದ್ರ ಅವರೊಂದಿಗೆ ನಟರಾದ ಪ್ರಕಾಶ್‌ ಬೆಳವಾಡಿ, ಸಂಜು ಬಸಯ್ಯ (ಕಾಮಿಡಿ ಕಿಲಾಡಿಗಳು) ,ಬೇಬಿ ಲೈಲಾ, ಪ್ರಮೋದ್‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸ್ಮಾರ್ಟ್‌ ಪೋನ್‌ ಮತ್ತು ಆಧುನಿಕ ತಂತ್ರಜ್ಞಾನ ಮಕ್ಕಳ ಮೇಲೆ ಬೀರುವ ಪರಿಣಾಮಗಳ ಸುತ್ತ “ಸಾವಿತ್ರಿ’ ಚಿತ್ರದ ಕಥಾ ಹಂದರ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next