Advertisement

2 ರಿಂದ ಸ್ವಚ್ಛತಾ ಹೀ ಸೇವಾ ಶುರು

02:49 PM Sep 27, 2019 | Team Udayavani |

ಭಟ್ಕಳ: ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಅ.2 ರಿಂದ 10ರ ವರೆಗೆ ನಡೆಯಲಿರುವ ಸ್ವಚ್ಛತಾ ಹೀ ಸೇವಾ ಕುರಿತು ಪೂರ್ವಭಾವಿ ಸಭೆಯಲ್ಲಿ ಪ್ಲಾಸ್ಟಿಕ್‌ ನಿಷೇಧ ಕಡ್ಡಾಯದ ಕುರಿತು ಜನಜಾಗೃತಿ ಮೂಡಿಸಲು ನಿರ್ಧರಿಸಲಾಯಿತು.

Advertisement

ಸಹಾಯಕ ಆಯುಕ್ತ ಸಾಜಿದ್‌ ಅಹ್ಮದ್‌ ಮುಲ್ಲಾ ಮಾತನಾಡಿ, ಅ.2 ರಂದು ಗಾಂಧಿ ಜಯಂತಿಯಂದು ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಬೆಳಗ್ಗೆ 7ಕ್ಕೆ ಸರಕಾರಿ ಆಸ್ಪತ್ರೆಯಲ್ಲಿ ಹಾಜರಿದ್ದು, ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸ್ವತ್ಛತಾ ಕಾರ್ಯಕ್ರಮ ಆರಂಭಿಸಲು ಸೂಚಿಸಿದರು.

ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಅರಿವು ಮೂಡಿಸಲು ಬೃಹತ್‌ ಜಾಥಾ ಹಮ್ಮಿಕೊಳ್ಳುವುದು. ಜಾಥಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳುವಂತೆ ಮಾಡುವುದರ ಬಗ್ಗೆ ತಿಳಿಸಿ, ಜಾಲಿ ಕಡಲ ತೀರದ ಸ್ವಚ್ಛತೆ ಬಗ್ಗೆಯೂ ಕಾರ್ಯಕ್ರಮ ಪಟ್ಟಿಯಲ್ಲಿ ಸೇರಿಸಿಕೊಳ್ಳಲು ಸೂಚಿಸಲಾಯಿತು.

ತಹಶೀಲ್ದಾರ್‌ ವಿ.ಪಿ. ಕೊಟ್ರಳ್ಳಿ, ಪುರಸಭೆ ಮುಖ್ಯಾಧಿಕಾರಿ ದೇವರಾಜ, ಜಾಲಿ ಪಪಂ ಮುಖ್ಯಾಧಿಕಾರಿ ವೇಣುಗೋಪಾಲ ಶಾಸ್ತ್ರಿ, ಪುರಸಭಾ ಪರಿಸರ ಅಭಿಯಂತ ವೆಂಕಟೇಶ ನಾವುಡ, ತಾಲೂಕು ಆರೋಗ್ಯಾಧಿಕಾರಿ ಡಾ| ಮೂರ್ತಿರಾಜ ಭಟ್ಟ,ಹೆಸ್ಕಾಂ ಸಹಾಯಕ ಕಾರ್ಯನಿವಾಹಕ ಅಭಿಯಂತ ಮಂಜುನಾಥ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ರಾಬಿತಾ, ತಂಝೀಂ ಮತ್ತಿತರ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next