Advertisement

SBI ಕಾಸರಗೋಡು ಶಾಖೆ ಮ್ಯಾನೇಜರ್‌, ಪತಿ, 2 ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

12:44 AM Jul 08, 2023 | Team Udayavani |

ಕಾಸರಗೋಡು: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಕಾಸರಗೋಡು ಶಾಖೆಯ ಮ್ಯಾನೇಜರ್‌, ಅವರ ಪತಿ ಮತ್ತು ಇಬ್ಬರು ಮಕ್ಕಳು ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

Advertisement

ಮಲಪ್ಪುರಂ ಮುಂಡುಪರಂಬ ಮೈತ್ರಿ ಕಾಲನಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಎಸ್‌ಬಿಐಯ ಕಾಸರಗೋಡು ಶಾಖೆಯ ಮ್ಯಾನೇಜರ್‌ ಶೀನಾ(35), ಅವರ ಪತಿ ಮಲಪ್ಪುರಂನ ಖಾಸಗಿ ಹಣಕಾಸು ಸಂಸ್ಥೆಯ ಮ್ಯಾನೇಜರ್‌ ಮೇಲೋಕಾಟಿಲ್‌ ಪರಂಬಿಲ್‌ ಸಬೀಶ್‌ (37), ಮಕ್ಕಳಾದ ಹರಿಗೋವಿಂದ್‌(6) ಮತ್ತು ಶ್ರೀವರ್ಧನ್‌(ಎರಡೂವರೆ ವರ್ಷ) ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸಬೀಶ್‌ ಮನೆಯ ಒಂದು ಕೊಠಡಿಯೊಳಗೆ ಹಾಗೂ ಶೀನಾ ಇನ್ನೊಂದು ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸಬೀಶ್‌ ನೇಣು ಬಿಗಿದ ಕೊಠಡಿಯ ಹಾಸಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಕೆಳಗೆ ನೆಲದಲ್ಲಿ ಪತ್ತೆಯಾಗಿದೆ. ಶೀನಾ ಕೆಲವು ದಿನಗಳ ಹಿಂದೆಯಷ್ಟೇ ಎಸ್‌ಬಿಐಯ ಕಾಸರಗೋಡು ಶಾಖೆಗೆ ವರ್ಗಾವಣೆಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next