Advertisement

ರಾಜ್ಯಸಭೆ ಚುನಾವಣೇಲಿ NOTA ಬಳಕೆ, ತಡೆ ನೀಡಲು ಸುಪ್ರೀಂ ನಕಾರ

12:46 PM Aug 03, 2017 | Sharanya Alva |

ನವದೆಹಲಿ: ರಾಜ್ಯಸಭೆ ಚುನಾವಣೆಯಲ್ಲಿ “ನೋಟಾ’ (ಮೇಲಿನ ಯಾರೂ ಅಲ್ಲ) ಗುಂಡಿಯನ್ನು ಮತಯಂತ್ರದಲ್ಲಿ ಅಳವಡಿಸಲು ಸುಪ್ರೀಂಕೋರ್ಟ್ ಗುರುವಾರ ಅನುಮತಿ ನೀಡಿದ್ದು, ಮತಯಂತ್ರದಲ್ಲಿ ನೋಟಾ ಬಳಕೆಗೆ ತಡೆ ನೀಡಬೇಕೆಂದು ಕೋರಿದ್ದ ಕಾಂಗ್ರೆಸ್ ಪಕ್ಷದ ಅರ್ಜಿಯನ್ನು ತಿರಸ್ಕರಿಸಿದೆ. ಇದರಿಂದಾಗಿ ಕಾಂಗ್ರೆಸ್ ಗೆ ತೀವ್ರ ಮುಖಭಂಗವಾದಂತಾಗಿದೆ.

Advertisement

ಚುನಾವಣೆಯಲ್ಲಿ “ನೋಟಾ’ (ಮೇಲಿನ ಯಾರೂ ಅಲ್ಲ) ಗುಂಡಿಯನ್ನು ಮತಯಂತ್ರದಲ್ಲಿ ಅಳವಡಿಸುವ ಕುರಿತು ಕಾಂಗ್ರೆಸ್ ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿತ್ತು.

ಗುಜರಾತ್‌ ಕಾಂಗ್ರೆಸ್‌ ಶಾಸಕರು ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ, ತಮ್ಮ ವಕೀಲ ಕಪಿಲ್‌ ಸಿಬಲ್‌ ಅವರ ಮೂಲಕ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಅರ್ಜಿ ಸಲ್ಲಿಕೆ ವೇಳೆ ವಾದ ಮಂಡಿಸಿದ ಸಿಬಲ್‌, ನೋಟಾ ಅಳವಡಿಕೆಗೆ ಕಾನೂನುಬದ್ಧ ಅವಕಾಶವಿಲ್ಲ ಎಂದಿದ್ದರು. ಆದರೆ ಸರ್ಕಾರಿ ಅಧಿಕಾರಿಗಳ ಪ್ರಕಾರ, 2014 ಜನವರಿಯಲ್ಲಿ ರಾಜ್ಯಸಭಾ ಚುನಾವಣೆ ನಡೆದಿದ್ದಾಗ ನೋಟಾ ಅಳವಡಿಸಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next