Advertisement

ಅಯೋಧ್ಯೆ ವಿವಾದ ಪ್ರಕರಣದ ವಿಚಾರಣೆ ಅ.18ರೊಳಗೆ ಪೂರ್ಣಗೊಳಿಸಿ; ಸುಪ್ರೀಂಕೋರ್ಟ್

08:39 AM Sep 19, 2019 | Nagendra Trasi |

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ವಿಚಾರಣೆ ಅಕ್ಟೋಬರ್ 18ರೊಳಗೆ ಮುಕ್ತಾಯಗೊಳಿಸಬೇಕಾಗಿದೆ ಎಂದು ಸುಪ್ರೀಂಕೋರ್ಟ್ ಬುಧವಾರಅಂತಿಮ ಗಡುವು ನೀಡಿದ್ದು , ಒಂದು ವೇಳೆ ದೂರುದಾರರು ಇಚ್ಛಿಸಿದಲ್ಲಿ ಮಂದಿರ-ಮಸೀದಿ ವಿವಾದವನ್ನು ಮಧ್ಯಸ್ಥಿಕೆ ಮೂಲಕವೂ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಹೇಳಿದೆ.

Advertisement

ಅಕ್ಟೋಬರ್ 18ರೊಳಗೆ ವಿಚಾರಣೆ ಪೂರ್ಣಗೊಳ್ಳಲೇಬೇಕಾಗಿದೆ. ಒಂದು ವೇಳೆ ದಿನಂಪ್ರತಿ ಒಂದು ಗಂಟೆ ಹೆಚ್ಚು ವಿಚಾರಣೆ ನಡೆಸಲು ಸಿದ್ಧ ಎಂದು ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.

ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ದೂರುದಾರರು ಮಧ್ಯಸ್ಥಿಕೆ ಮೂಲಕವೂ ಬಗೆಹರಿಸಿಕೊಳ್ಳಬಹುದು ಎಂದು 26ನೇ ದಿನದ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ.

ವಿಚಾರಣೆಯನ್ನು ಅಕ್ಟೋಬರ್ 18ರೊಳಗೆ ಮುಕ್ತಾಯಗೊಳಿಸಿದರೆ ಡಿಸೆಂಬರ್ ಅಂತ್ಯದೊಳಗೆ ತೀರ್ಪು ನೀಡಬಹುದಾಗಿದೆ ಎಂದು ತಿಳಿಸಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next