Advertisement

ಶಾಹೀನ್ ಬಾಗ್ ಪ್ರತಿಭಟನಾಕಾರರ ಜತೆ ಮಾತುಕತೆಗೆ ಹಿರಿಯ ವಕೀಲ ಸಂಜಯ್ ಹೆಗ್ಡೆ ನೇಮಕ

09:47 AM Feb 18, 2020 | Team Udayavani |

ನವದೆಹಲಿ: ಕಳೆದ ಹಲವಾರು ದಿನಗಳಿಂದ ರಸ್ತೆಯನ್ನು ಬಂದ್ ಮಾಡಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ದಿಲ್ಲಿಯ ಶಾಹೀನ್ ಬಾಗ್ ಪ್ರತಿಭಟನಾಕಾರರ ಜತೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಿರಿಯ ವಕೀಲ ಸಂಜಯ್ ಹೆಗ್ಡೆ ಅವರನ್ನು ಸುಪ್ರೀಂಕೋರ್ಟ್ ಸೋಮವಾರ ಆದೇಶ ನೀಡಿದೆ.

Advertisement

ಶಾಹೀನ್ ಬಾಗ್ ಪ್ರತಿಭಟನೆ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ಜಸ್ಟೀಸ್ ಎಸ್ ಕೆ ಕೌಲ್ ಮತ್ತು ಜಸ್ಟೀಸ್ ಕೆಎಂ ಜೋಸೆಫ್ ನೇತೃತ್ವದ ದ್ವಿಸದಸ್ಯ ಪೀಠ ಹಿರಿಯ ವಕೀಲ ಹೆಗ್ಡೆ ಅವರನ್ನು ಸಂವಾದಕರನ್ನಾಗಿ ಆಯ್ಕೆ ಮಾಡಿರುವುದಾಗಿ ವರದಿ ತಿಳಿಸಿದೆ.

ಜನರಿಗೆ ಪ್ರತಿಭಟನೆ ನಡೆಸುವ ಹಕ್ಕು ಇದೆ. ಆದರೆ ಇದರಿಂದ ಈ ರಸ್ತೆಯಲ್ಲಿ ಪ್ರತಿನಿತ್ಯ ಸಂಚರಿಸುವ ಜನರಿಗೆ ತೊಂದರೆಯಾಗಬಾರದು. ಹೊಸ ಕಾನೂನಿನ ಬಗ್ಗೆ ಕೆಲವು ಜನರು ಕಠಿಣ ನಿಲುವು ಹೊಂದಿದ್ದಾರೆ. ಆದರೆ ಯಾರೊಬ್ಬರು ಆ ಬಗ್ಗೆ ತೀಕ್ಷ್ಣ ಅಭಿಪ್ರಾಯ ವ್ಯಕ್ತಪಡಿಸಬಾರದು ಎಂದು ಹೇಳುವಂತಿಲ್ಲ. ಒಂದು ವೇಳೆ ಸಾರ್ವಜನಿಕ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟಿಸುತ್ತಿದ್ದರೆ ಅದಕ್ಕೆ ಬೇರೆ ಸ್ಥಳ ಹುಡುಕಿಕೊಳ್ಳಬೇಕು ಎಂದು ಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next