Advertisement

ರಾಜೀವ್ ಹಂತಕರ ಬಿಡುಗಡೆಯ ಸುಪ್ರೀಂ ತೀರ್ಪು ದುರದೃಷ್ಟಕರ: ಕಾಂಗ್ರೆಸ್ ಅಸಮಾಧಾನ

04:10 PM Nov 11, 2022 | Team Udayavani |

ನವದೆಹಲಿ :ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರು ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡುವಂತೆ ಸುಪ್ರಿಂ ಕೋರ್ಟ್ ನೀಡಿರುವ ಆದೇಶವನ್ನು ಕಾಂಗ್ರೆಸ್ ಶುಕ್ರವಾರ ” ಸ್ವೀಕಾರಾರ್ಹವಲ್ಲ ಮತ್ತು ಸಂಪೂರ್ಣ ತಪ್ಪು. ಸುಪ್ರೀಂ ಕೋರ್ಟ್ ಈ ಸಮಸ್ಯೆ ಬಗ್ಗೆ ದೇಶದ ಮನೋಭಾವಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಿಲ್ಲ” ಎಂದು ಅಸಮಾಧಾನ ಹೊರ ಹಾಕಿದೆ.

Advertisement

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂವಹನದ ಉಸ್ತುವಾರಿ ಜೈರಾಮ್ ರಮೇಶ್ ಈ ಬಗ್ಗೆ ಹೇಳಿಕೆ ನೀಡಿದ್ದು, ಮಾಜಿ ಪ್ರಧಾನಿಯ ಉಳಿದ ಹಂತಕರನ್ನು ಬಿಡುಗಡೆ ಮಾಡುವ ಸುಪ್ರೀಂ ಕೋರ್ಟ್ ನ ನಿರ್ಧಾರವು “ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಸಂಪೂರ್ಣವಾಗಿ ತಪ್ಪು. ಕಾಂಗ್ರೆಸ್ ಪಕ್ಷವು ಅದನ್ನು ಸ್ಪಷ್ಟವಾಗಿ ಟೀಕಿಸುತ್ತದೆ. ಸಂಪೂರ್ಣವಾಗಿ ಅಸಮರ್ಥನೀಯವಾಗಿದೆ. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಭಾರತದ ಆತ್ಮ ಸಾಕ್ಷಿಯ ಅನುಗುಣವಾಗಿ ಕಾರ್ಯನಿರ್ವಹಿಸದಿರುವುದು ಅತ್ಯಂತ ದುರದೃಷ್ಟಕರ” ಎಂದಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಮತ್ತು ಆರ್.ಪಿ.ರವಿಚಂದ್ರನ್ ಸೇರಿ ಆರು ಮಂದಿಯನ್ನು ಅವಧಿಗೂ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.ಅವಧಿಗೂ ಮುನ್ನ ಬಿಡುಗಡೆ ಕೋರಿ ನಳಿನಿ ಮತ್ತು ರವಿಚಂದ್ರನ್ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಬಿ.ವಿ. ನಾಗರತ್ನ ಅವರ ಪೀಠವು ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಎ.ಜಿ. ಪೆರಾರಿವಾಲನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಎಲ್ಲರ ವಿಷಯದಲ್ಲಿ ಅನ್ವಯಿಸುತ್ತದೆ ಎಂದು ಹೇಳಿ, ಅಪರಾಧಿಗಳಾದ ನಳಿನಿ, ಸಂತನ್‌, ಮುರುಗನ್‌, ಶ್ರೀಹರನ್‌, ರಾಬರ್ಟ್‌ ಪಾಯಸ್‌ ಮತ್ತು ರವಿಚಂದ್ರನ್‌ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಪೀಠವು ಆದೇಶ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next