Advertisement

ಮುಂದಿನ ಆದೇಶದ ವರೆಗೆ ಜ್ಞಾನವಾಪಿ ‘ಶಿವಲಿಂಗ’ರಚನೆ ರಕ್ಷಣೆಗೆ ಸುಪ್ರೀಂ ಆದೇಶ

04:48 PM Nov 11, 2022 | Team Udayavani |

ನವದೆಹಲಿ: ವಾರಾಣಸಿಯ ಜ್ಞಾನವಾಪಿ-ಶೃಂಗಾರ್ ಗೌರಿ ಸಂಕೀರ್ಣ ಆವರಣದಲ್ಲಿ ‘ಶಿವಲಿಂಗ’ ಪತ್ತೆಯಾಗಿದೆ ಎಂದು ಹೇಳಲಾದ ಪ್ರದೇಶದ ರಕ್ಷಣೆಯನ್ನು ಮುಂದಿನ ಆದೇಶದವರೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ವಿಸ್ತರಿಸಿದೆ.

Advertisement

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಪಿ.ಎಸ್. ನರಸಿಂಹ ಅವರ ಪೀಠವು ವಾರಾಣಸಿ ಜಿಲ್ಲಾ ನ್ಯಾಯಾಧೀಶರ ಮುಂದೆ ಜ್ಞಾನವಾಪಿ ಸಾಲಿನಲ್ಲಿ ಸಲ್ಲಿಸಲಾದ ಎಲ್ಲಾ ಮೊಕದ್ದಮೆಗಳ ಕ್ರೋಢೀಕರಣಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಹಿಂದೂ ಪರರಿಗೆ ಅನುಮತಿ ನೀಡಿದೆ.

ಸರ್ವೇ ಕಮಿಷನರ್ ನೇಮಕಕ್ಕೆ ಸಂಬಂಧಿಸಿದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿಯ ಆಡಳಿತ ಸಮಿತಿಯು ಸಲ್ಲಿಸಿದ ಮೇಲ್ಮನವಿಯ ಬಗ್ಗೆ ಹಿಂದೂ ಪರರು ಮೂರು ವಾರಗಳಲ್ಲಿ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ಸೂಚಿಸಿದೆ.

ಮೇ 17 ರಂದು, ಸರ್ವೋಚ್ಚ ನ್ಯಾಯಾಲಯ ವಾರಾಣಸಿಯ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಮಧ್ಯಂತರ ಆದೇಶವನ್ನು ನೀಡಿದ್ದು, ಸಮೀಕ್ಷೆಯಲ್ಲಿ ‘ಶಿವಲಿಂಗ’ ಕಂಡುಬಂದಿದೆ ಎಂದು ಹೇಳಲಾದ ಜ್ಞಾನವಾಪಿ-ಶೃಂಗಾರ್ ಗೌರಿ ಸಂಕೀರ್ಣದೊಳಗಿನ ಪ್ರದೇಶದ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವಂತೆ ನಿರ್ದೇಶಿಸಿತ್ತು.

ಮೇ 20 ರಂದು, ಸರ್ವೋಚ್ಚ ನ್ಯಾಯಾಲಯ ಜ್ಞಾನವಾಪಿ ಮಸೀದಿಯ ಮೇಲೆ ಹಿಂದೂ ಭಕ್ತರು ಸಲ್ಲಿಸಿದ ಸಿವಿಲ್ ಮೊಕದ್ದಮೆಯನ್ನು ಸಿವಿಲ್ ನ್ಯಾಯಾಧೀಶರಿಂದ (ಹಿರಿಯ ವಿಭಾಗ) ವಾರಾಣಸಿಯ ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿ, ಸಮಸ್ಯೆಯ ಸಂಕೀರ್ಣತೆ ಮತ್ತು ಸೂಕ್ಷ್ಮತೆಯನ್ನು ನೋಡಿ, 25-30 ವರ್ಷಕ್ಕಿಂತ ಹೆಚ್ಚು ಅನುಭವವಿರುವ ಹಿರಿಯ ನ್ಯಾಯಾಂಗ ಅಧಿಕಾರಿ ಪ್ರಕರಣವನ್ನು ನಿಭಾಯಿಸಿದರೆ ಉತ್ತಮ ಎಂದು ಹೇಳಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next