Advertisement

ಅರ್ನಾಬ್‌ ಗೆ 3 ವಾರಗಳ ಬಂಧನದಿಂದ ರಕ್ಷಣೆ

11:22 PM Apr 24, 2020 | Sriram |

ಹೊಸದಿಲ್ಲಿ: ರಿಪಬ್ಲಿಕ್‌ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್‌ ಗೋಸ್ವಾಮಿ ವಿರುದ್ಧ ಮೂರು ವಾರಗಳ ಯಾವ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಆದೇಶ ನೀಡಿದೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಗುರಿಯಾಗಿರುವ ಅವರ ವಿರುದ್ಧ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಫ್ಐಆರ್‌ಗಳು ದಾಖಲಾಗಿವೆ. ಹೀಗಾಗಿ, ಅದರ ವಿರುದ್ಧ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

Advertisement

ನ್ಯಾ|ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾ.ಎಂ.ಆರ್‌.ಶಾ ಅವರನ್ನೊಳಗೊಂಡ ಸುಪ್ರೀಂ ನ್ಯಾಯಪೀಠದ ಮುಂದೆ ಗೋಸ್ವಾಮಿ ಪರ ವಕೀಲ ಮುಕುಲ್‌ ರೋಹಟಗಿ ಅರಿಕೆ ಮಾಡಿಕೊಂಡು ಕಾರ್ಯಕ್ರಮ ಪ್ರಸಾರ ಮಾಡಿದ ಆರೋಪಕ್ಕೆ ಗುರಿಯಾಗಿರುವ ತಮ್ಮ ಕಕ್ಷಿ ದಾರನ ವಿರುದ್ಧ ಕ್ರಮ ಕೈಗೊಳ್ಳುವುದರ ವಿರುದ್ಧ ತಡೆ ನೀಡಬೇಕೆಂದರು. ಜತೆಗೆ ಪೊಲೀಸರ ತನಿಖೆಗೆ ಅರ್ನಾಬ್‌ ಸಂಪೂರ್ಣ ಸಹಕಾರ ನೀಡಬೇಕೆಂದು ನ್ಯಾಯಪೀಠ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next