Advertisement

ಹಿಜಾಬ್ ತೀರ್ಪಿಗೆ ಬೆದರಿಕೆ : ಆರೋಪಿ ಮನವಿಯ ಮೇಲೆ ಪ್ರತಿಕ್ರಿಯೆ ಕೇಳಿದ ಸುಪ್ರೀಂ

08:19 PM Apr 13, 2022 | Team Udayavani |

ನವದೆಹಲಿ : ಹಿಜಾಬ್ ವಿಚಾರದಲ್ಲಿ ನೀಡಿದ ತೀರ್ಪಿನ ನಂತರ ಕರ್ನಾಟಕ ಹೈಕೋರ್ಟ್‌ನ ಮೂವರು ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಆರೋಪಿ ಅರ್ಜಿಯನ್ನು ರದ್ದುಗೊಳಿಸುವಂತೆ ಅಥವಾ ವರ್ಗಾವಣೆ ಮಾಡುವಂತೆ ಕೋರಿ ಸಲ್ಲಿಸಿರುವ ಮನವಿಯ ಕುರಿತು ಸುಪ್ರೀಂ ಕೋರ್ಟ್ ಬುಧವಾರ ತಮಿಳುನಾಡು ಮತ್ತು ಕರ್ನಾಟಕ ಸರಕಾರದಿಂದ ಪ್ರತಿಕ್ರಿಯೆ ಕೇಳಿದೆ.

Advertisement

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ತಮಿಳುನಾಡು, ಕರ್ನಾಟಕ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದ್ದು, ಮೇ 18 ರ ಮೊದಲು ಪ್ರತಿಕ್ರಿಯೆಯನ್ನು ಕೋರಿದೆ.

ಬಂಧಿತ ಆರೋಪಿ ರಹಮತುಲ್ಲಾ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ, ನನ್ನ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತೇನೆ, ಮತ್ತು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಎರಡು ವಿಭಿನ್ನ ರಾಜ್ಯಗಳ ವಿವಿಧ ನ್ಯಾಯಾಲಯಗಳು/ಪೊಲೀಸ್ ಠಾಣೆಗಳನ್ನು ಸಂಪರ್ಕಿಸುವುದು ಅಸಾಧ್ಯವೆಂದು ಹೇಳಿಕೊಂಡಿದ್ದು,ಕರ್ನಾಟಕದಲ್ಲಿ ದಾಖಲಾಗಿರುವ ಎರಡನೇ ಎಫ್‌ಐಆರ್ ಅನ್ನು ರದ್ದುಗೊಳಿಸಲು ಅಥವಾ ವರ್ಗಾಯಿಸಲು ಕೋರಿ ಮನವಿ ಸಲ್ಲಿಸಲಾಗಿದೆ.

ಎರಡು ವಿಭಿನ್ನ ತನಿಖಾ ಸಂಸ್ಥೆಗಳು ಸಮಾನಾಂತರವಾಗಿ ಎರಡೂ ಎಫ್‌ಐಆರ್‌ಗಳಲ್ಲಿ ತನಿಖೆಯನ್ನು ಮುಂದುವರಿಸುವುದು ಕಾನೂನಿನ ಸರಿಯಾದ ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ತಮಿಳಿನಲ್ಲಿ ಮಾತನಾಡುವ ವ್ಯಕ್ತಿಯೊಬ್ಬ ಮೂವರು ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿರುವ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿಯ ವಿರುದ್ಧ ವಿಧಾನಸೌಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ತಮಿಳುನಾಡು ತೌಹೀದ್ ಜಮಾತ್ (ಟಿಎನ್‌ಟಿಜೆ) ಎಂಬ ಸಂಘಟನೆಯ ಪದಾಧಿಕಾರಿ ಎಂದು ಹೇಳಲಾದ ರಹಮತುಲ್ಲಾ ನನ್ನು ಮಧುರೈನಲ್ಲಿ ತಮಿಳುನಾಡು ಪೊಲೀಸರು ಬಂಧಿಸಿದ್ದರು.ಆತನ ವಿರುದ್ಧ ಕರ್ನಾಟಕದಲ್ಲಿ ಎರಡನೇ ಎಫ್‌ಐಆರ್ ದಾಖಲಾಗಿದೆ.

Advertisement

ಬೆದರಿಕೆಯ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಮೂವರೂ ನ್ಯಾಯಾಧೀಶರಿಗೆ ‘ವೈ ಕೆಟಗರಿ’ ಭದ್ರತೆಯನ್ನು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next