Advertisement

ರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣ: ಮಹಾ ಸರಕಾರಕ್ಕೆ ಸುಪ್ರೀಂ ನೋಟಿಸ್

06:20 PM Dec 15, 2021 | Team Udayavani |

ಮುಂಬಯಿ: ಅಶ್ಲೀಲ ಚಿತ್ರ ಪ್ರಕರಣ ಕೇಸ್ ಗೆ ಸಂಬಂಧಿಸಿ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ರಾಜ್ ಕುಂದ್ರಾ ಸಲ್ಲಿಸಿದ ಮೇಲ್ಮನವಿ ಕುರಿತು ಮಹಾರಾಷ್ಟ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

Advertisement

ಅಶ್ಲೀಲ ವೀಡಿಯೋಗಳನ್ನು ವಿತರಿಸಿದ ಆರೋಪದಲ್ಲಿ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಿದ ಮೇಲ್ಮನವಿಯ ಕುರಿತು ಸುಪ್ರೀಂ ಕೋರ್ಟ್ ಬುಧವಾರ ಮಹಾರಾಷ್ಟ್ರ ಸರಕಾರದಿಂದ ಪ್ರತಿಕ್ರಿಯೆ ಕೇಳಿದೆ.

ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಅನಿರುದ್ಧ ಬೋಸ್ ಅವರ ಪೀಠವು ಬುಧವಾರ ಮಹಾರಾಷ್ಟ್ರ ಸರಕಾರಕ್ಕೆ ನೋಟಿಸ್ ಜಾರಿ ಮಾಡಿ, ಮುಂಬೈ ಪೊಲೀಸರ ಸೈಬರ್ ಸೆಲ್ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ಉತ್ತರ ನೀಡುವಂತೆ ಕೋರಿದೆ.

ಈ ವರ್ಷ ಜುಲೈನಲ್ಲಿ, ಕುಂದ್ರಾ ಅವರನ್ನು ಮುಂಬೈ ಪೊಲೀಸರು  ಪ್ರಕರಣದಲ್ಲಿ ಬಂಧಿಸಿದ್ದರು, ಅಲ್ಲಿ ಅವರು ಅಪ್ಲಿಕೇಶನ್ ಮೂಲಕ ಪೋರ್ನ್ ಚಿತ್ರಗಳನ್ನು ವಿತರಿಸಿದರು ಎಂದು ಆರೋಪಿಸಲಾಗಿತ್ತು. ಸೆಪ್ಟೆಂಬರ್‌ನಲ್ಲಿ ಅವರಿಗೆ ಜಾಮೀನು ನೀಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next