Advertisement

ಶಿಂಧೆ ಬಣ ನಿಜವಾದ ಶಿವಸೇನೆ: ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ

07:09 PM Feb 22, 2023 | Team Udayavani |

ನವದೆಹಲಿ: ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದಿರುವ ಚುನಾವಣಾ ಆಯೋಗದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

Advertisement

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಠಾಕ್ರೆ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಸಲ್ಲಿಕೆಗಳನ್ನು ಗಮನಿಸಿತು ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ನೇತೃತ್ವದ ಬಣದ ಪ್ರತಿಕ್ರಿಯೆಯನ್ನು ಕೇಳಿತು.

ಈ ಮಧ್ಯೆ ಠಾಕ್ರೆ ಬಣದ ಶಾಸಕರನ್ನು ಅನರ್ಹಗೊಳಿಸಲು ಯಾವುದೇ ವಿಪ್ ಅಥವಾ ಪ್ರಕ್ರಿಯೆಯನ್ನು ಪ್ರಾರಂಭಿಸುವುದಿಲ್ಲ ಎಂದು ಶಿಂಧೆ ಬಣದ ವಕೀಲರು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು. “ ನೋಟಿಸ್ ನೀಡಿ. ಎರಡು ವಾರಗಳಲ್ಲಿ ಪ್ರತಿ ಅಫಿಡವಿಟ್ ಸಲ್ಲಿಸಲಾಗುವುದು,” ಎಂದು ಪೀಠ ಹೇಳಿದೆ.

ನೋಟಿಸ್ ನೀಡುವಾಗ, ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದು ಒಪ್ಪಿಕೊಂಡಿರುವ ಚುನಾವಣಾ ಸಮಿತಿಯ ನಿರ್ಧಾರವನ್ನು ತಡೆಯಲು ಪೀಠವು ನಿರಾಕರಿಸಿತು, ಇನ್ನೊಂದು ಬದಿಯನ್ನು ಕೇಳದೆ ಅದನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ. ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಠಾಕ್ರೆ ಬಣದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿತ್ತು.

ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಗುರುತಿಸುವುದರ ಜೊತೆಗೆ, ಚುನಾವಣಾ ಸಮಿತಿಯು ಪಕ್ಷದ ಮೂಲ ‘ಬಿಲ್ಲು ಮತ್ತು ಬಾಣ’ ಚುನಾವಣ ಚಿಹ್ನೆಯನ್ನು ಅದಕ್ಕೆ ನೀಡಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next