Advertisement

ನಿರ್ಭಯಾ ಪ್ರಕರಣ: ಅಕ್ಷಯ್ ಸಿಂಗ್ ಕ್ಯುರೇಟಿವ್ ಅರ್ಜಿ ವಜಾ ಮಾಡಿದ ಸುಪ್ರೀಂ

09:49 AM Jan 31, 2020 | keerthan |

ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಓರ್ವನಾದ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

Advertisement

ನ್ಯಾ.ಎನ್ ವಿ ರಮಣ ನೇತೃತ್ವದ ಪಂಚ ಸದಸ್ಯ ಪೀಠದ ಮುಂದೆ ಇಂದು ಅಕ್ಷಯ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಮರಣದಂಡನೆಗೆ ತಡೆ ನೀಡಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ನ್ಯಾ.ಎನ್ ವಿ ರಮಣ, ಅರುಣ್ ಮಿಶ್ರಾ, ಆರ್ ಎಫ್ ನರೀಮನ್, ಆರ್ ಭಾನುಮತಿ ಮತ್ತು ಅಶೋಕ್ ಭೂಷಣ್ ರಿದ್ದ ಪೀಠ ಇದರ ವಿಚಾರಣೆ ನಡೆಸಿತು. ಕ್ಯುರೇಟಿವ್ ಅರ್ಜಿ ತಿರಸ್ಕೃತವಾದ ಕಾರಣ ಮುಂದೆ ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಮುಂದೆ ರಾಷ್ಟ್ರಪತಿಗಳ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡುವ ಅವಕಾಶವಿದೆ.

2012ರ ಡಿಸೆಂಬರ್ 16ರಂದು ದೆಹಲಿಯ 23 ವರ್ಷದ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ಬಸ್ ನಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿತ್ತು. ಈ ಪ್ರಕರಣದ ನಾಲ್ವರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next