Advertisement

ನಿರ್ಭಯಾ ಪ್ರಕರಣ; ಕ್ಷಮಾದಾನ ರದ್ದು ಪ್ರಶ್ನಿಸಿದ್ದ ದೋಷಿ ವಿನಯ್ ಅರ್ಜಿ ವಜಾಗೊಳಿಸಿದ ಸುಪ್ರೀಂ

10:14 AM Feb 15, 2020 | Nagendra Trasi |

ನವದೆಹಲಿ: ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಆದೇಶದ ವಿರುದ್ಧ ನಿರ್ಭಯಾ ಅತ್ಯಾಚಾರ ಪ್ರಕರಣದ ದೋಷಿ ವಿನಯ್ ಶರ್ಮಾ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

Advertisement

ಸುಪ್ರೀಂಕೋರ್ಟ್ ನಜಸ್ಟೀಸ್ ಆರ್.ಬಾನುಮತಿ ಮತ್ತು ಜಸ್ಟೀಸ್ ಅಶೋಕ್ ಭೂಷಣ್ ಮತ್ತು ಎಎಸ್ ಬೋಪಣ್ಣ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಶರ್ಮಾನ ಅರ್ಜಿಯನ್ನು ವಜಾಗೊಳಿಸಿದೆ.

ಗಲ್ಲುಶಿಕ್ಷೆಗೆ ಗುರಿಯಾಗಿದ್ದ ನಾಲ್ವರ ದೋಷಿಗಳಲ್ಲಿ ವಿನಯ್ ಶರ್ಮಾ ಒಬ್ಬನಾಗಿದ್ದಾನೆ. ವಿಚಾರಣೆ ಹೆಸರಿನಲ್ಲಿ ಜೈಲಲ್ಲಿ ನೀಡಲಾದ ಕಿರುಕುಳದಿಂದ ಕಕ್ಷಿದಾರ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ. ಹಾಗಾಗಿ ಆತನಿಗೆ ವಿಧಿಸಲಾಗಿರುವ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಮಾರ್ಪಡಿಸಬೇಕೆಂದು ಶರ್ಮಾ ಪರ ವಕೀಲ ಎಪಿ ಸಿಂಗ್ ಸುಪ್ರೀಂನಲ್ಲಿ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next