Advertisement
ಜಯಲಲಿತಾ ನಿಧನದ ನಂತರ ಮುಖ್ಯಮಂತ್ರಿ ಗಾದಿ ಮೇಲೆ ಕಣ್ಣಿಟ್ಟಿದ್ದ ಶಶಿಕಲಾ ಕಳೆದ 8 ದಿನಗಳಿಂದ ತಮಿಳುನಾಡಿನ ರಾಜಕಾರಣದಲ್ಲಿ ಹೈವೋಲ್ಟೇಜ್ ಡ್ರಾ ಸೃಷ್ಟಿಸಿದ್ದರು. ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಶಶಿಕಲಾಗೆ 4 ವರ್ಷ ಜೈಲುಶಿಕ್ಷೆ, 10 ಕೋಟಿ ರೂಪಾಯಿ ದಂಡ ವಿಧಿಸಿದೆ. ಅಲ್ಲದೇ 10 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತಾಗಿದೆ.
ಬೆಂಗಳೂರು ವಿಶೇಷ ಕೋರ್ಟ್ ಗೆ ಶಶಿಕಲಾ ನಟರಾಜನ್ ಕೂಡಲೇ ಶರಣಾಗಬೇಕು ಎಂದು ಸುಪ್ರೀಂಕೋರ್ಟ್ ಪೀಠ ಸೂಚಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಧಾಕರನ್, ಇಳವರಸಿ ಕೂಡಾ ಅಪರಾಧಿಗಳಾಗಿದ್ದು, ಇವರು ಕೂಡಾ ಉಳಿದ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. ಜಯಲಲಿತಾ ಅವರು ನಿಧನರಾಗಿದ್ದರಿಂದ ಅವರ ವಿರುದ್ಧದ ಆರೋಪವನ್ನು ಸುಪ್ರೀಂಕೋರ್ಟ್ ಕೈಬಿಟ್ಟಿರುವುದಾಗಿ ತಿಳಿಸಿದೆ.