Advertisement

ಕ್ರಿಮಿನಲ್‌ ಆರೋಪಿ ಜನಪ್ರತಿನಿಧಿಗಳು ಸ್ಪರ್ಧಿಸಬಹುದು; ಮಹತ್ವದ ತೀರ್ಪು

11:13 AM Sep 25, 2018 | Team Udayavani |

ನವದೆಹಲಿ: ಅಪರಾಧ ಪ್ರಕರಣಗಳಲ್ಲಿ ಆರೋಪ ಹೊತ್ತ ಶಾಸಕರು ಅಥವಾ ಸಂಸದರನ್ನು ಆರೋಪ ಸಾಬೀತಾಗುವ ಮೊದಲೇ ಅವರನ್ನು ಆ ಸಾಂವಿಧಾನಿಕ ಹುದ್ದೆಗಳಿಂದ ಅನರ್ಹಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್‌, ಮಂಗಳವಾರ ಮಹತ್ವದ ತೀರ್ಪು ನೀಡಿದೆ. 

Advertisement

 ಆರೋಪ ಹೊತ್ತ ರಾಜಕಾರಣಿಗಳು ಶಾಸಕರಾಗಿ, ಸಂಸದರಾಗಿ ಮುಂದುವರಿಯಲು ಅವಕಾಶ ಕೊಡಬಾರದೆಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿ ಕೋರ್ಟ್‌ ಈ ತೀರ್ಪು ನೀಡಿದೆ. 

ಮುಖ್ಯನ್ಯಾಯ ಮೂರ್ತಿ ದೀಪಕ್‌ ಮಿಶ್ರಾ ಅವರ ಪೀಠ ಈ ಮಹತ್ವದ ತೀರ್ಪು ನೀಡಿದೆ. 

ಕ್ರಿಮಿನಲ್‌ ಆರೋಪ ಹೊಂದಿದಾಕ್ಷಣ ಸ್ಪರ್ಧಿಸಲು ನಿರ್ಬಂಧ ಹೇರಲು ಸಾಧ್ಯವಿಲ್ಲ . ಆರೋಪ ಸಾಬೀತಾದರೆ ಮಾತ್ರ ಸ್ಪರ್ಧಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ತೀರ್ಪು ನೀಡಲಾಗಿದೆ. ಈ ಕುರಿತು ಕಾನೂನು ರಚಿಸಲು ಕೇಂದ್ರ ಸರ್ಕಾರ ಮತ್ತು ಸಂಸತ್‌ಗೆ ಕೋರ್ಟ್‌ ಸೂಚನೆ ನೀಡಿದೆ. 

ಅಭ್ಯರ್ಥಿಗಳು ತಮ್ಮ ಕ್ರಿಮಿನಲ್‌ ಹಿನ್ನಲೆಯ ಕುರಿತು ಚುನಾವಣ ಆಯೋಗ ಮತ್ತು ಮತದಾರರಿಗೆ ಸಾಮಾಜಿಕ ತಾಣಗಳ ಮೂಲಕ ಮಾಹಿತಿ ನೀಡಬೇಕು ಎಂದು ಕೋರ್ಟ್‌ ಹೇಳಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next