Advertisement

ಎಸ್ಸಿ, ಎಸ್ಟಿ ಬಡ್ತಿ ಮೀಸಲು ತಂದಿದ್ದು ಕರ್ನಾಟಕ ಮಾತ್ರ: ಸಿದ್ದರಾಮಯ್ಯ

07:25 AM May 11, 2019 | Team Udayavani |

ಕಲಬುರಗಿ: ಎಸ್ಸಿ, ಎಸ್ಟಿ ಮುಂಬಡ್ತಿ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ ಕಾಯ್ದೆಯನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿರುವುದರಿಂದ ನಮ್ಮ ಆಶಯಕ್ಕೆ ಬೆಲೆ ಸಿಕ್ಕಂತಾಗಿದೆ. ಇಂತಹ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತಂದಿದ್ದು ಕರ್ನಾಟಕ ಮಾತ್ರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

Advertisement

ಚಿಂಚೋಳಿ ತಾಲೂಕಿನ ಕುಂಚಾವರಂದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕಾಯ್ದೆ ಮೂಲಕ ಕಾಂಗ್ರೆಸ್‌ ಪಕ್ಷ ದಲಿತರು ಮತ್ತು ಹಿಂದುಳಿದವರ ಪರವಾಗಿದೆ ಎಂದು ನಿರೂಪಿಸಿದಂತಾಗಿದೆ.

ಸರ್ಕಾರಿ ನೌಕರರಿಗೆ ಅನ್ಯಾಯವಾಗಬಾರದೆಂದು ನಾನು ಮುಖ್ಯಮಂತ್ರಿಯಾಗಿದ್ದಾಗ ಪರಿಶಿಷ್ಟ ಜಾತಿ ಮತ್ತು ಪಂಗಡ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತಂದಿದ್ದೆ. ಆ ಕಾಯ್ದೆ ವಿರುದ್ಧ ಒಬ್ಬರು ಸುಪ್ರೀಂಕೋರ್ಟ್‌ಗೆ ಹೋಗಿದ್ದರು. ಆದರೆ, ಇವತ್ತು ಸುಪ್ರೀಂಕೋರ್ಟ್‌ ನಮ್ಮ ಕ್ರಮವನ್ನು ಎತ್ತಿ ಹಿಡಿದಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next