Advertisement

ಉನ್ನಾವ್‌ ಕೇಸು: ಇಂದು ಸುಪ್ರೀಂನಲ್ಲಿ ವಿಚಾರಣೆ

01:12 AM Aug 01, 2019 | mahesh |

ನವದೆಹಲಿ/ಲಕ್ನೋ: ಉನ್ನಾವ್‌ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಬರೆದಿರುವ ಪತ್ರ ಸಿಕ್ಕಿಲ್ಲ. ಈ ಬಗ್ಗೆ ಸುಪ್ರೀಂಕೋರ್ಟ್‌ ರಿಜಿಸ್ಟ್ರಿ ವಿವರಣೆ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಬುಧವಾರ ಆದೇಶ ನೀಡಿದ್ದಾರೆ. ಇದರ ಜತೆಗೆ ಗುರುವಾರ ಈ ಬಗ್ಗೆ ವಿಚಾರಣೆ ನಡೆಸುವುದಾಗಿ ಅವರು ಹೇಳಿದ್ದಾರೆ. ಇದರ ಜತೆಗೆ ಉತ್ತರ ಪ್ರದೇಶ ಸರ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾ ಸ್ಥಿತಿ ವರದಿ ಸಲ್ಲಿಸವಂತೆಯೂ ಸೂಚಿಸಿದ್ದಾರೆ. ಮಕ್ಕಳ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ವಿಚಾರಣೆ ವೇಳೆ ಹಿರಿಯ ನ್ಯಾಯವಾದಿ ವಿ.ಗಿರಿ ವಾದ ಮಂಡನೆಗೆ ಸಿದ್ಧಗೊಳ್ಳುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಈ ಮಾತುಗಳನ್ನಾಡಿದ್ದಾರೆ.

Advertisement

ಸಿಬಿಐ ಕೇಸು ದಾಖಲು: ಇದೇ ವೇಳೆ ಪ್ರಕರಣ ಈಗಾಗಲೇ ಸಿಬಿಐಗೆ ಹಸ್ತಾಂತರವಾಗಿದ್ದು, ಬಿಜೆಪಿ ಶಾಸಕ ಕುಲದೀಪ್‌ ಸೆನ್ಗಾರ್‌ ಮತ್ತು ಇತರ ಒಂಭತ್ತು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ ಮಹಿಳೆಗೆ ನ್ಯಾಯ ಒದಗಿಸಲು ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next