Advertisement

ಪರಿಶಿಷ್ಟರ ಕಾಲೋನಿಗೆ ಶುದ್ಧ ನೀರು

02:41 PM Nov 23, 2017 | Team Udayavani |

ಕಾರವಾರ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಜನರಿರುವ ಗ್ರಾಮೀಣ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಶುದ್ಧ
ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ಆದ್ಯತೆ ನೀಡಿ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನಾ ಸಮಿತಿ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ ತಿಳಿಸಿದರು.

Advertisement

ಅವರು ಬುಧವಾರ ಜಿಪಂದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸಂಬಂಧಪಟ್ಟ ಕಾರ್ಯಕ್ರಮಗಳ ಪರಿಶೀಲನೆ ಮಾಡಿ ಉತ್ತರ ಕರ್ನಾಟಕದ ಗದಗ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಿಗೆ ಹೊಲಿಸಿದಾಗ ಜಿಲ್ಲೆಯಲ್ಲಿ ಪ್ಲೋರೈಡ್‌ಯುಕ್ತ ನೀರು ಮತ್ತು ನೀರಿನಿಂದ ಹರಡುವ ರೋಗಗಳ ಪ್ರಮಾಣ ಕಡಿಮೆ ಇದ್ದು ಮುಂಜಾಗೃತ ಕ್ರಮವಾಗಿ ಜಿಲ್ಲೆಗೆ ಒದಗಿರುವ ಅನುದಾನದಲ್ಲಿ 37
ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿ ಮತ್ತು ಕುಡಿಯುವ ನೀರಿಗಾಗಿ ಲಕ್ಷಾನುಗಟ್ಟಲೆ ಖರ್ಚು ಮಾಡಿ ಹೊಸ ಬೋರವೆಲ್‌ ಕೊರೆಯುವ ಬದಲು ಸವಳು ನೀರು ಇರುವ ಬೋರವೆಲ್‌ಗೆ ಮರು ಪೂರಣ ಮಾಡುವ ವ್ಯವಸ್ಥೆ ಮಾಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಿಇಒ ಮಾತನಾಡಿ ಜಿಲ್ಲೆಯಲ್ಲಿ ಮುಖ್ಯವಾಗಿ ಹಳಿಯಾಳ ಮತ್ತು ಮುಂಡಗೋಡ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುತ್ತಿದೆ. ಈಗಾಗಲೇ ಜಿಲ್ಲೆಯ ಜೋಯಿಡಾ ತಾಲೂಕಿನ ಉಳವಿ ಮತ್ತು ಕುಂಬಾರವಾಡದಲ್ಲಿ 9 ಲಕ್ಷಗಳ ಅಂದಾಜು ವೆಚ್ಚದಲ್ಲಿ
ನೀರು ಶುದ್ಧಿಕರಣ 2 ಘಟಕಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದರೊಂದಿಗೆ ನ.28 ರಂದು ನಡೆಯವ ಸಾಮಾನ್ಯ ಸಭೆಯಲ್ಲಿ ಜನಪ್ರತಿನಿಧಿಗಳಿಂದ ಮಾಹಿತಿ ಪಡೆದು 37 ಶುದ್ಧ ನೀರಿನ ಘಟಕಗಳಿಗಾಗಿ ಸ್ಥಳಗಳನ್ನು ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇಡಿ ಜಿಲ್ಲೆಯಲ್ಲಿ ನೈರ್ಮಲ್ಯಕ್ಕೆ ಆದ್ಯತೆ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 24982 ಶೌಚಾಲಯಗಳ ನಿರ್ಮಾಣ ಗುರಿ ಹೊಂದಲಾಗಿತ್ತು. ಆ ಪೈಕಿ 24650 ಶೌಚಾಲಯ ನಿರ್ಮಾಣ ನಿರ್ಮಿಸಿ ಶೇ.98 ರಷ್ಟು ಪ್ರಗತಿ ಸಾಧಿಸುವುದರೊಂದಿಗೆ ನ.30 ರೊಳಗೆ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲಾಯನ್ನಾಗಿಸಲಾಗುವುದು ಎಂದು ಸಿ.ಇ.ಒ ಹೇಳಿದರು.

ಕಾಮಗಾರಿಗಳ ಪಾವತಿಯನ್ನು ಮಾರ್ಗಸೂಚಿಯ ಪ್ರಕಾರ ಮಾಡಬೇಕು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ಮುಖ್ಯಮಂತ್ರಿಗಳ 21 ಅಂಶ ಕಾರ್ಯಕ್ರಮದಡಿ ಜಿಲ್ಲೆಯ ಪ್ರಗತಿಯನ್ನು ತ್ವರಿತಗತಿಯಲ್ಲಿ ಸಾಧಿಸತಕ್ಕದ್ದು ಎಂದು ನಂಜಯ್ಯನಮಠ ಸಂಬಂಧಿಸಿದ ಅಧಿ ಕಾರಿಗಳಿಗೆ ಎಚ್ಚರಿಸಿದರು. ಜಿಪಂ ಅಧ್ಯಕ್ಷೆ ಜಯಶ್ರೀ ಮೋಗೇರ ಉಪಸ್ಥತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next