Advertisement

Prisoners: ಬಡ ಕೈದಿಗಳ ನೆರವಿಗೆ ಯೋಜನೆ

09:39 PM Apr 07, 2023 | Team Udayavani |

ನವದೆಹಲಿ: ದಂಡ ಅಥವಾ ಜಾಮೀನು ಮೊತ್ತವನ್ನು ಭರಿಸಲು ಸಾಧ್ಯವಾಗದೇ ಬಂದೀಖಾನೆಗಳಲ್ಲಿ ಜೀವನ ಕಳೆಯುತ್ತಿರುವ ಬಡ ಕೈದಿಗಳಿಗೆ ಆರ್ಥಿಕ ನೆರವು ಒದಗಿಸಲು ಕೇಂದ್ರ ಸರ್ಕಾರವು ನೂತನ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ. “ಈ ಯೋಜನೆಯು ಬಡ ಕೈದಿಗಳು, ಪ್ರಮುಖವಾಗಿ ಸಾಮಾಜಿಕವಾಗಿ ಹಿಂದುಳಿದವರು ಅಥವಾ ಕಡಿಮೆ ಶಿಕ್ಷಣ ಹಾಗೂ ಕಡಿಮೆ ಆದಾಯ ಹೊಂದಿದವರು ಜೈಲಿನಿಂದ ಹೊರಬರಲು ಅನುವು ಮಾಡಿಕೊಡುತ್ತದೆ’ ಎಂದು ಕೇಂದ್ರ ಗೃಹ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ. ದಂಡ ಅಥವಾ ಜಾಮೀನು ಮೊತ್ತವನ್ನು ಭರಿಸಲು ಸಾಧ್ಯವಾಗದ ಬಡ ಕೈದಿಗಳಿಗೆ ಆರ್ಥಿಕ ನೆರವು ಒದಗಿಸುವ ಯೋಜನೆಯನ್ನು ಈ ವರ್ಷದ ಬಜೆಟ್‌ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next