Advertisement

ಶಾಲೆಗಳಲ್ಲಿ 2020-21ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಮುಂದೂಡಿ ಆದೇಶ

11:16 AM Mar 27, 2020 | keerthan |

ಬೆಂಗಳೂರು: ಕೋವಿಡ್-19 ಸೋಂಕು ತಡಗಟ್ಟುವಿಕೆಗೆ ಮುಂಜಾಗೃತ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಿದ್ದು ಅದರಂತೆ 2020-21ನೇ ಸಾಲಿನ ದಾಖಲಾತಿ ಪ್ರಕ್ರಿಯೆಯನ್ನು ಮುಂದೂಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Advertisement

ಹಲವು ಖಾಸಗಿ ಶಾಲೆಗಳು 2020-21ರ ಸಾಲಿನ ಶುಲ್ಕವನ್ನು ಮಾರ್ಚ್ 31ರ ಮೊದಲು ಪಾವತಿ ಮಾಡಬೇಕು ಎಂದು ಪೋಷಕರಿಗೆ ಒತ್ತಾಯಿಸುತ್ತಿದೆ ಎಂಬ ದೂರು ಕೇಳಿ ಬಂದ ಹಿನ್ನಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ.

ಶಾಲೆಗಳಿಗೆ ಯಾವುದೇ ರೀತಿಯ ಕಾರ್ಯಗಳಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಭೇಟಿ ನೀಡದಂತೆ ಸೂಕ್ತ ಕ್ರಮಕೈಗೊಳ್ಳಬೇಕು. ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರಿಗೆ ರಜೆ ಘೋಷಿಸಲಾಗಿದ್ದು, ಸಾರ್ವಜನಿಕರು ಶಾಲೆಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next