Advertisement

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

01:53 AM Sep 20, 2024 | Team Udayavani |

ಪುತ್ತೂರು: ಸುಬ್ರಹ್ಮಣ್ಯ-ಮಂಜೇಶ್ವರ ಅಂತಾರಾಜ್ಯ ರಸ್ತೆಯ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಬೈಕ್‌ ಮತ್ತು ಶಾಲಾ ಬಸ್‌ ಪರಸ್ಪರ ಢಿಕ್ಕಿ ಹೊಡೆದು ಬೈಕ್‌ ಸವಾರ ಗಂಭಿರ ಗಾಯಗೊಂಡ ಘಟನೆ ಸೆ.19 ರಂದು ಸಂಭವಿಸಿದೆ.

Advertisement

ಪುತ್ತೂರಿನಿಂದ ಕಾಣಿಯೂರು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ನವಾಝ್ ಎಣ್ಮೂರು ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ಬಸ್‌ ಮುಖಾಮುಖೀ ಢಿಕ್ಕಿಯಾಗಿದೆ. ಪರಿಣಾಮ ಬೈಕ್‌ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಕಾಲಿಗೆ ಗಂಭೀರ ಗಾಯವಾಗಿದೆ.

ಗಾಯಾಳನ್ನು ಹನೀಫ್‌ ರೆಂಜಲಾಡಿ ಅವರು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಭಕ್ತಕೋಡಿ ಜಂಕ್ಷನ್‌ ಬಳಿ ಅಪಾಯಕಾರಿ ತಿರುವು ಇದ್ದು, ಇಲ್ಲಿ ಪದೇಪದೆ ಅವಘಡಗಳು ಸಂಭವಿಸುತ್ತಿವೆ.

 

Advertisement

Udayavani is now on Telegram. Click here to join our channel and stay updated with the latest news.

Next