Advertisement

ಚಿಕ್ಕಮಗಳೂರು: ಸ್ಕೂಲ್‌ ಬಸ್‌ ಪಲ್ಟಿ; ವಿದ್ಯಾರ್ಥಿನಿ ಸಾವು

11:01 AM Nov 10, 2018 | Team Udayavani |

ಎನ್‌.ಆರ್‌.ಪುರ: ಇಲ್ಲಿನ ಬಾಳಿಕೊಪ್ಪ ಬಳಿ ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಮಕ್ಕಳ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು  ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾಳೆ ಮತ್ತು 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. 

Advertisement

ಭದ್ರಾವತಿಯ ಶಾಲೆಯೊಂದರ ವಿದ್ಯಾರ್ಥಿಗಳನ್ನು ಅವಘಡಕ್ಕೀಡಾದ ಬಸ್‌ನಲ್ಲಿ ಶೃಂಗೇರಿಯತ್ತ ಕರೆದೊಯ್ಯಲಾಗುತ್ತಿತ್ತು. ಬೆಳಗ್ಗೆ  8 ಗಂಟೆಯ ವೇಳೆಗೆ ಅವಘಡ ಸಂಭವಿಸಿದೆ.

ಎನ್‌.ಆರ್‌.ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಗಾಯಾಳು ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next