Advertisement

School: ಹುಸಿ ಬಾಂಬ್‌ ಬೆದರಿಕೆ- 24 ಗಂಟೆಗಳೊಳಗೆ ಆರೋಪಿಗಳ ಪತ್ತೆ- ಡಿಕೆಶಿ

11:21 PM Dec 01, 2023 | Team Udayavani |

ಬೆಂಗಳೂರು: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಹಾಕಿದವರನ್ನು 24 ಗಂಟೆಗಳೊಳಗೆ ಪತ್ತೆ ಹಚ್ಚಲಾಗುವುದು. ಪೊಲೀಸರು ಈಗಾಗಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ಹುಸಿ ಬಾಂಬ್‌ ಕರೆ ಪಡೆದಿದ್ದ ನೀವ್‌ ಅಕಾಡೆಮಿಗೆ ಭೇಟಿ ನೀಡಿದ ಬಳಿಕ ಶಿವಕುಮಾರ್‌ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಒಂದು ವರ್ಷದ ಹಿಂದೆಯೂ ಈ ರೀತಿ ಆಗಿತ್ತು. ಶಾಲೆಗಳಿಗೆ ಬೆದರಿಕೆ ಬಂದಿರುವ ಸುದ್ದಿ ತಿಳಿದ ಕೂಡಲೇ ಗಾಬರಿಯಾಯಿತು. ನನಗೆ ಪರಿಚಯವಿರುವ ಕೆಲವು ಶಾಲೆಗಳಿಗೆ ಮೇಲ್‌ ಸಂದೇಶದ ಮೂಲಕ ಬೆದರಿಕೆ ಬಂದಿದೆ. ಪೊಲೀಸ್‌ ಆಯುಕ್ತರು ಇದು ಹುಸಿ ಬಾಂಬ್‌ ಬೆದರಿಕೆ ಎಂದು ದೃಢಪಡಿಸಿದ್ದಾರೆ. ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದರು.

ಬೆಂಗಳೂರು ಹಬ್ಬ ನಡೆಯುವ ಸಂದರ್ಭದಲ್ಲೇ ಬಾಂಬ್‌ ಬೆದರಿಕೆ ಕರೆ ಬಂದಿದೆ, ಕೆಲವು ಕಿಡಿಗೇಡಿಗಳು ಈ ರೀತಿ ಚೇಷ್ಟೆ ಮಾಡುತ್ತಾರೆ. ಹಬ್ಬ ಅದರ ಪಾಡಿಗೆ ಅದು ನಡೆಯುತ್ತದೆ ಎಂದು ತಿಳಿಸಿದರು.

ಭದ್ರತೆ ಹೆಚ್ಚಳಕ್ಕೆ ಸೂಚಿಸಿದ್ದೇನೆ: ಸಿಎಂ

ಬೆಂಗಳೂರು: ಶಾಲೆಗಳಿಗೆ ಬೆದರಿಕೆ ಕರೆಗಳು ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆಗೆ ಚರ್ಚೆ ನಡೆಸಿದ್ದು, ಎಲ್ಲೆಡೆ ಭದ್ರತೆ ಹೆಚ್ಚಳಕ್ಕೆ ಸೂಚನೆ ನೀಡಿದ್ದಾರೆ.

Advertisement

ಕೆಂಗಲ್‌ ಹನುಮಂತಯ್ಯನವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಬಳಿಕ ಈ ಬಗ್ಗೆ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಎಚ್ಚರಿಕೆಯಿಂದ ಇರಬೇಕು. ಸುದ್ದಿ ಮಾಡಿದವರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ. ಪೋಷಕರು ಆತಂಕ ಪಡಬಾರದು. ಈ ಬಗ್ಗೆ ವರದಿ ಪಡೆಯಲಾಗಿದೆ. ಈ ರೀತಿ ಹಿಂದೆಯೂ ಮಾಡಿ¨ªಾರೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next