Advertisement

ಯುಪಿಯಲ್ಲಿ ಭೀಕರ ದುರಂತ:ರೈಲು ಢಿಕ್ಕಿಯಾಗಿ 13 ಮಕ್ಕಳ ದುರ್ಮರಣ 

09:01 AM Apr 26, 2018 | |

ಖುಷಿನಗರ: ಮಾನವ ರಹಿತ ರೈಲ್ವೇ ಕ್ರಾಸಿಂಗ್‌ನಲ್ಲಿ  ರೈಲೊಂದು ಢಿಕ್ಕಿಯಾಗಿ  13 ಶಾಲಾ ಮಕ್ಕಳು ದಾರುಣವಾಗಿ ಸಾವನ್ನಪ್ಪಿ 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಉತ್ತರಪ್ರದೇಶದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ನಡೆದಿದೆ. 

Advertisement

ವರದಿಯಾದಂತೆ ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ವೇಳೆ ವೇಗವಾಗಿ ಬಂದ ರೈಲು ಢಿಕ್ಕಿಯಾಗಿದ್ದು ಸ್ಥಳದಲ್ಲೇ ಹಲವು ಮಕ್ಕಳು  ಸಾವನ್ನಪ್ಪಿದ್ದಾರೆ. ಢಿಕ್ಕಿಯ ರಭಸಕ್ಕೆ ವಾಹನ ನಜ್ಜುಗುಜ್ಜಾಗಿದೆ. ಕೆಲ ಮಕ್ಕಳು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.

ಅಪಘಾತವಾದೊಡನೆ ಸ್ಥಳೀಯರು ನೂರಾರು ಮಂದಿ ಆಗಮಿಸಿ ರಕ್ಷಣಾ ಕಾರ್ಯ ನಡೆಸಿದರು.

 ವಾಹನದಲ್ಲಿ 25 ಮಂದಿ  ವಿದ್ಯಾರ್ಥಿಗಳಿದ್ದರು ಎಂದು ತಿಳಿದು ಬಂದಿದ್ದು, ಹೆಚ್ಚಿನವರು 10 ವರ್ಷದ ಒಳಗಿನವರು ಎಂದು ಹೇಳಲಾಗಿದೆ. 

ಗಾಯಗೊಂಡಿರುವ ಹಲವು ಮಕ್ಕಳ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next