Advertisement

ಅಕ್ಟೋಬರ್‌ 15ರ ವರೆಗೆ ಶಾಲೆಗಿಲ್ಲ ಮಕ್ಕಳ ಭೇಟಿ

12:12 AM Oct 01, 2020 | mahesh |

ಬೆಂಗಳೂರು: ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ವಿದ್ಯಾರ್ಥಿಗಳು ಅಕ್ಟೋಬರ್‌ 15ರ ವರೆಗೂ ಭೇಟಿ ನೀಡುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.

Advertisement

ಶಾಲಾರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಹಾಗೂ ಈ ಸಂಬಂಧ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಪ್ರಮಾಣಿತ ಕಾರ್ಯಸೂಚಿ ವಿಧಾನ (ಎಸ್‌ಒಪಿ) ಸಿದ್ಧಪಡಿಸಿದೆ. ಹಾಗೆಯೇ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಶಾಲಾರಂಭಕ್ಕಾಗಿ ಜನಪ್ರತಿನಿಧಿಗಳಿಂದ ಸಲಹೆ ಯನ್ನು ಆಹ್ವಾನಿಸಿದ್ದಾರೆ. ಆದರೆ ಶಾಲಾರಂಭವು ಅ. 15ರ ತನಕ ಸಾಧ್ಯವೇ ಇಲ್ಲ ಎಂಬುದನ್ನು ಇಲಾಖೆ ಸ್ಪಷ್ಟ ಪಡಿಸಿದೆ ಮತ್ತು ಅ. 15ರ ಅನಂತರ ಪರಿಸ್ಥಿತಿ ಹೇಗಿದೆ ಎಂಬು ದರ ಆಧಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ.

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಕೇಂದ್ರ ಸರಕಾರದ ಗೃಹ ಇಲಾಖೆಯ ಮಾರ್ಗ ಸೂಚಿಯಂತೆ ಸೆ. 21ರಿಂದ ಕಂಟೈನ್ಮೆಂಟ್‌ ವಲಯ ಹೊರತುಪಡಿಸಿ 9ರಿಂದ 12ನೇ ತರಗತಿಗಳನ್ನು ತೆರೆದು ವಿದ್ಯಾರ್ಥಿಗಳಿಗೆ ಸಂದೇಹ ಪರಿಹಾರಕ್ಕಾಗಿ ಶಾಲೆಗೆ ಭೇಟಿ ನೀಡಲು ಅನುಮತಿ ನೀಡಲಾಗಿತ್ತು. ಆದರೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟಂಬರ್‌ ಅಂತ್ಯದ ವರೆಗೆ ವಿದ್ಯಾರ್ಥಿಗಳು ಭೇಟಿ ನೀಡದಿರಲು ಇಲಾಖೆ ಸೂಚಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next