Advertisement

ಸಹಜ ಸ್ಥಿತಿಯತ್ತ ಕಾಶ್ಮೀರ: ಕಣಿವೆ ರಾಜ್ಯದಲ್ಲಿ ಇಂದಿನಿಂದ ಶಾಲೆ, ಸರ್ಕಾರಿ ಕಚೇರಿ ಪುನರಾರಂಭ

10:16 AM Aug 20, 2019 | Team Udayavani |

ಶ್ರೀನಗರ: ವಿಶೇಷ ಸ್ಥಾನಮಾನ ರದ್ದತಿಯ ನಂತರ ಯಾವುದೇ ಅಹಿತಕರ ಘಟನೆಗಳು ನಡೆಯದ ಕಾರಣ ಜಮ್ಮು ಕಾಶ್ಮೀರದಲ್ಲಿ ನಿಷೇಧಾಜ್ಞೆಯನ್ನು ಸಡಿಲಗೊಳಿಸಲಾಗುತ್ತಿದೆ. ಇದರಿಂದಾಗಿ ಕಳೆದ 15 ದಿನಗಳಿಂದ ಮುಚ್ಚಿರುವ ಶಾಲಾ ಕಾಲೇಜುಗಳು ಮತ್ತು ಸರಕಾರಿ ಕಚೇರಿಗಳು ಇಂದಿನಿಂದ ಮತ್ತೆ ಆರಂಭವಾಗಲಿವೆ.

Advertisement

ವಿಶೇಷ ಸ್ಥಾನಮಾನ ರದ್ದತಿಯ ಮೊದಲೇ ಮುನ್ನೆಚ್ಚರಿಕಾ ಕ್ರಮವಾಗಿ ಕಣಿವೆ ರಾಜ್ಯದಲ್ಲಿ ಭದ್ರತಾ ವ್ಯವಸ್ಥೆ ಹೆಚ್ಚುವರಿ ಯೋಧರನ್ನು ನೇಮಿಸಲಾಗಿತ್ತು. ಈ ವೇಳೆಗೆ ಎಲ್ಲಾ ಶಾಲಾ ಕಾಲೇಜು, ಸರಕಾರಿ ಕಚೇರಿಗಳನ್ನು ಮುಚ್ಚಲಾಗಿತ್ತು. ಈಗ 15 ದಿನಗಳ ಬಳಿಕ ಅಂದರೆ ಸೋಮವಾರದಿಂದ ಮತ್ತೆ ಆರಂಭವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next